Webdunia - Bharat's app for daily news and videos

Install App

ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಷಿ ವಿರುದ್ಧ ಮುತಾಲಿಕ್ ಸ್ಪರ್ಧೆ ಖಚಿತ

Webdunia
ಮಂಗಳವಾರ, 25 ಮಾರ್ಚ್ 2014 (19:34 IST)
PR
PR
ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಷಿ ವಿರುದ್ಧ ಸ್ಪರ್ಧೆ ಮಾಡುವುದು ಖಚಿತ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.ಸ್ವಲ್ಪ ಹೊತ್ತಿನಲ್ಲಿ ಈ ಕುರಿತು ಅಧಿಕೃತ ಘೋಷಣೆ ಮಾಡಲಿದ್ದಾರೆ. ಹುಬ್ಬಳ್ಳಿಯಲ್ಲಿ ಮುತಾಲಿಕ್ ನೇತೃತ್ವದಲ್ಲಿ ನಡೆದ ಶ್ರೀರಾಮಸೇನೆ ಕಾರ್ಯಕರ್ತರ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಮುತಾಲಿಕ್ ಅವರನ್ನು ರಾಜ್ಯ ಘಟಕ ಬಿಜೆಪಿಗೆ ಸೇರಿಸಿಕೊಂಡ ಬಳಿಕ ಬಿಜೆಪಿ ಹೈಕಮಾಂಡ್ ಅವರ ಸೇರ್ಪಡೆಯನ್ನು ಕೈಬಿಟ್ಟು ಮತ್ತೆ ಹೊರಹಾಕಿದ್ದರು. ಇದರಿಂದ ತೀವ್ರವಾಗಿ ನೊಂದಿದ್ದ ಪ್ರಮೋದ್ ಮುತಾಲಿಕ್ ನಿನ್ನೆ ಪತ್ರಿಕಾಗೋಷ್ಠಿ ನಡೆಸಿ ಕಣ್ಣೀರು ಹಾಕಿದರು.ನನ್ನದು ಸ್ವಚ್ಛ ಜೀವನ, ಶುದ್ಧ ವ್ಯಕ್ತಿತ್ವ, ನನ್ನ ತಂದೆಯ ಮುಖ ನೋಡೋದಕ್ಕೂ ನನಗೂ ಅವಕಾಶ ಆಗಲಿಲ್ಲ. ಸಮಾಜಕ್ಕಾಗಿ ನನ್ನ ಜೀವನ ತ್ಯಾಗ ಮಾಡಿದ್ದೇನೆ.

ಇಂತಹ ಎಲ್ಲವನ್ನೂ ತ್ಯಾಗ ಮಾಡಿದ ವ್ಯಕ್ತಿಗೆ ಈ ರೀತಿಯ ದ್ರೋಹ ಮಾಡಿರುವುದು ಏಕೆ ಎಂದು ಮುತಾಲಿಕ್ ಪ್ರಶ್ನಿಸಿದರು. ಪಕ್ಷಕ್ಕೆ ಕರೆಸಿಕೊಂಡು ಈಗ ಅಪಮಾನ ಮಾಡಲಾಗಿದೆ. ನಾಳೆ 11 ಗಂಟೆಯೊಳಗೆ ತಮ್ಮನ್ನು ಬಿಜೆಪಿಗೆ ವಾಪಸ್ ಕರೆಸಿಕೊಳ್ಳಬೇಕು ಎಂಬ ಗಡುವನ್ನು ಮುತಾಲಿಕ್ ವಿಧಿಸಿದರು.ಎಲ್ಲ ಕಹಿಯನ್ನು ಮರೆತು, ಸಂಘಪರಿವಾರದ ಹಿರಿಯರು ನನ್ನನ್ನು ಒಪ್ಪಿಸಿದರು. ಆದರೆ ಈ ರೀತಿ ಮಾಡುವುದು ಸರಿಯೇ ಎಂದು ಮುತಾಲಿಕ್ ಪ್ರಶ್ನಿಸಿದ್ದರು.ಆದರೆ ಬಿಜೆಪಿಯಿಂದ ಮುತಾಲಿಕ್ ಮರುಸೇರ್ಪಡೆ ಬಗ್ಗೆ ಯಾವುದೇ ಪ್ರತಿಕ್ರಿಯೆ ಬರದಿರುವುದರಿಂದ ಪ್ರಹ್ಲಾದ್ ಜೋಷಿ ವಿರುದ್ಧ ಸ್ಪರ್ಧಿಸುವ ನಿರ್ಧಾರಕ್ಕೆ ಬಂದಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments