Webdunia - Bharat's app for daily news and videos

Install App

ನರೇಂದ್ರ ಮೋದಿ ಬಿಜೆಪಿ ಪಕ್ಷಕ್ಕೆ ಭಸ್ಮಾಸುರನಂತೆ: ದಿಗ್ವಿಜಯ್ ಸಿಂಗ್

Webdunia
ಸೋಮವಾರ, 3 ಫೆಬ್ರವರಿ 2014 (13:36 IST)
PTI
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಭಸ್ಮಾಸುರನಂತೆ. ತನ್ನನ್ನು ಬೆಳಿಸಿದ ಪಕ್ಷದ ನಾಯಕರನ್ನು ಈಗಾಗಲೇ ತಿಂದು ತೇಗಿದ್ದಾರೆ. ಇದೀಗ ಬಿಜೆಪಿ ಪಕ್ಷವನ್ನೇ ನುಂಗುವ ಹವಣಿಕೆಯಲ್ಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು , ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಗುಜರಾತಿನ ಮಾಜಿ ಸಿಎಂ ಕೇಶುಭಾಯಿ ಪಟೇಲ್, ವಿಎಚ್ಪಿ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ಪ್ರವೀಣ ತೊಗಾಡಿಯಾ, ದೀಪಸಿಂಗ್ ವಾಘೇಲ, ಕಾಶಿರಾಮ ರಾಣಾ, ಲಾಲಕೃಷ್ಣ ಆಡ್ವಾಣಿ ಅವರಂಥ ನಾಯಕರೇ ಕೈ ಹಿಡಿದು ರಾಜಕೀಯವಾಗಿ ಬೆಳೆಸಿದರು. ಅವರನ್ನೇ ಮೋದಿ ಮೂಲೆಗುಂಪು ಮಾಡುವ ಕೆಲಸ ಮಾಡಿದ್ದಾರೆ. ಈಗ ಮೋದಿಯನ್ನು ಹೋದಲ್ಲೆಲ್ಲಾ ಕೊಂಡಾಡುವ ರಾಜನಾಥ ಸಿಂಗ್ ಸರದಿ ಎಂದರು.

ಸೋನಿಯಾ ಗಾಂಧಿ ಮತ್ತು ಮನಮೋಹನ ಸಿಂಗ್ ಅವರಿಂದಾಗಿ ಮಾಹಿತಿ ಹಕ್ಕು ಕಾಯ್ದೆ, ಉಚಿತ ಕಡ್ಡಾಯ ಶಿಕ್ಷಣ, ಆಹಾರ ಭದ್ರತೆ ಕಾಯ್ದೆ, ನರೇಗಾ, ಲೋಕಪಾಲದಂಥ ಕಾನೂನು ಜಾರಿಗೆ ಬಂದಿದೆ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments