Select Your Language

Notifications

webdunia
webdunia
webdunia
webdunia

ಲೋಕಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ನಿಲೇಕಣಿಯಿಂದ ಪಾದಯಾತ್ರೆ

ಲೋಕಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ನಿಲೇಕಣಿಯಿಂದ ಪಾದಯಾತ್ರೆ
ಬೆಂಗಳೂರು , ಗುರುವಾರ, 20 ಮಾರ್ಚ್ 2014 (15:15 IST)
PTI
ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಂದನ್ ನಿಲೇಕಣಿ ಪಾದಯಾತ್ರೆ ಮೂಲಕ ಚುನಾವಣೆ ಪ್ರಚಾರ ಆರಂಭಿಸಿದ್ದಾರೆ.

ಬಿಜೆಪಿ ಹಿರಿಯ ನಾಯಕ ಹಾಲಿ ಸಂಸದ ಅನಂತ್ ಕುಮಾರ್ ವಿರುದ್ಧ ಸ್ಪರ್ಧಿಸಿರುವ ನಿಲೇಕಣಿ ಚುನಾವಣೆಯಲ್ಲಿ ಜಯಗಳಿಸಲು ಶತಾಯ ಗತಾಯ ಗೆಲ್ಲಲು ಹರಸಾಹಸ ಪಡುತ್ತಿದ್ದಾರೆ.

ನಿಲೇಕಣಿ ಪ್ರತಿನಿತ್ಯ ಬೆಳಿಗ್ಗೆ ಕ್ಷೇತ್ರದ ಬೀದಿ ಬೀತಿಗಳಲ್ಲಿ ಸಂಚರಿಸಿ ಮತಯಾಚಿಸುತ್ತಿದ್ದಾರೆ.ಈ ಹಿಂದೆ ಹಾಲಿ ಸಂಸದ ಅನಂತ್ ಕುಮಾರ್ ಕೂಡಾ ತಮ್ಮ ಕ್ಷೇತ್ರದಾದ್ಯಂತ ಭಾರಿ ಪ್ರಚಾರ ಆರಂಭಿಸಿದ್ದರು. ಉಭಯರ ಜಿದ್ದಾಜಿದ್ದಿನ ಕಣ ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಲ್ಲಿ ನಾಲ್ಕು ಕಾಂಗ್ರೆಸ್ ಶಾಸಕರು ಮತ್ತು ನಾಲ್ವರು ಬಿಜೆಪಿ ಶಾಸಕರನ್ನು ಹೊಂದಿದೆ

ಆಸಕ್ತಿಕರ ವಿಷಯವೆಂದರೆ, ನಿಲೇಕಣಿ ತಮ್ಮ ಎದುರಾಳಿ ಅನಂತ್ ಕುಮಾರ್ ವಿರುದ್ಧ ವೈಯಕ್ತಿಕ ಟೀಕೆಗಳನ್ನು ಮಾಡುತ್ತಿಲ್ಲ. ಕೇವಲ ಅಭಿವೃದ್ಧಿ ಮಂತ್ರ ಜಪಿಸಿ ಜನರ ಮನ ಗೆಲ್ಲಲು ಪ್ರಯತ್ನಿಸುತ್ತಿದ್ದಾರೆ.

Share this Story:

Follow Webdunia kannada