Publish Date: Sat, 17 May 2014 (17:21 IST)
Updated Date: Sat, 17 May 2014 (17:24 IST)
ಲೋಕಸಭೆ ಚುನಾವಣೆಯಲ್ಲಿ ವಿಷಯಾಧಾರಿತ ಪ್ರಚಾರ ಮಾಡುವಲ್ಲಿ ವಿಫಲವಾಗಿದ್ದರಿಂದ ಹೀನಾಯ ಸೋಲನುಭವಿಸಬೇಕಾಯಿತು ಎಂದು ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ಚುನಾವಣೆಯ ಸೋಲಿನ ಸಂಪೂರ್ಣ ಹೊಣೆಯನ್ನು ಹೊರಲು ಸಿದ್ದವಾಗಿದ್ದೇನೆ. ಜನತೆಯ ತೀರ್ಪಿಗೆ ತಲೆಬಾಗಬೇಕಾಗುತ್ತದೆ ಹೊಸದಾಗಿ ಜನಾದೇಶ ಪಡೆಯಲು ವಿಧಾನಸಭೆಯನ್ನು ವಿಸರ್ಜಿಸಲಾಗುವುದು. ನನ್ನ ಜೀವನದಲ್ಲಿಯೇ ಇಂತಹ ಚುನಾವಣೆ ನೋಡಿಲ್ಲ ಎಂದರು.
ಪರಸ್ಪರ ವೈಯಕ್ತಿಕ ನಿಂದನೆಯಲ್ಲಿ ಜೆಡಿಯು ಪಕ್ಷದ ಮುಖಂಡರು ಕಾಲ ಕಳೆದಿರುವುದು ಸೋಲಿಗೆ ಮತ್ತೊಂದು ಕಾರಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿ ನೇತೃತ್ವದ ಮೋದಿ ಸರಕಾರ ಒಳ್ಳೆ ದಿನಗಳು ಬರಲಿವೆ ಎನ್ನುವ ಭರವಸೆಯನ್ನು ದೇಶದ ಜನತೆಗೆ ನೀಡಿದೆ. ಬಿಜೆಪಿ ನೀಡಿದ ಭರವಸೆಯನ್ನು ಈಡೇರಿಸಲಿ ಎಂದು ತಿರುಗೇಟು ನೀಡಿದರು.
ವಿಧಾನಸಭೆಯಲ್ಲಿ ನಮಗೆ ಸಂಖ್ಯಾಬಲವಿದೆ. ಆದರೆ, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ ಬಿಹಾರ್ ರಾಜ್ಯದಲ್ಲಿ ಕೋಮುವಾಗಳೆಲ್ಲಾ ಒಗ್ಗೂಡಿದರು ಇದರಿಂದಾಗಿ ಪಕ್ಷಕ್ಕೆ ಸೋಲಾಗಿದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಲಿಸ ಹಿನ್ನೆಲೆಯನ್ನು ಬಿಚ್ಚಿಟ್ಟಿದ್ದಾರೆ.
Rajesh patil
Publish Date: Sat, 17 May 2014 (17:21 IST)
Updated Date: Sat, 17 May 2014 (17:24 IST)