Webdunia - Bharat's app for daily news and videos

Install App

ಭಾವಿ ಪ್ರಧಾನಿ ನರೇಂದ್ರ ಮೋದಿಗೆ ದೆಹಲಿಯಲ್ಲಿ ಭವ್ಯ ಸ್ವಾಗತ

Webdunia
ಶನಿವಾರ, 17 ಮೇ 2014 (15:31 IST)
ಲೋಕಸಭೆ ಚುನಾವಣೆಯಲ್ಲಿ ಐತಿಹಾಸಿಕ ಜಯಗಳಿಸಿದ ಬಿಜೆಪಿಯ ಭಾವಿ ಪ್ರಧಾನಿ ನರೇಂದ್ರ ಮೋದಿ ದೆಹಲಿಗೆ ಆಗಮಿಸುತ್ತಿದ್ದಂತೆ ಸಾವಿರಾರು ಕಾರ್ಯಕರ್ತರು ಸಂತಸ ಸಂಭ್ರಮದಿಂದ ಸ್ವಾಗತಿಸಿದರು.  
 
ಮೋದಿ ಗುಜರಾತ್‌ನಿಂದ ಇಂದು ಬೆಳಿಗೆ 11 ಗಂಟೆಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ನಿಲ್ದಾಣದ ಹೊರಗಡೆ ಬೆಳಿಗ್ಗೆಯಿಂದ ಕಾಯುತ್ತಿದ್ದ ಕಾರ್ಯಕರ್ತರು ಮೋದಿಯನ್ನು ಕಾಣುತ್ತಲೇ ಸಂತಸ ವ್ಯಕ್ತಪಡಿಸಿ ಬಿಜೆಪಿ ಕಚೇರಿಯವರೆಗೆ ಮೆರವಣಿಗೆಯಲ್ಲಿ ಸಾಗಿದರು. 
 
ಮೋದಿ ನಮ್ಮ ಸಿಂಹ. ದೇಶದ ಜನತೆಗಾಗಿ ಕಾರ್ಯನಿರ್ವಹಿಸುತ್ತಾರೆ. ಅಭಿವೃದ್ಧಿಗಾಗಿ ಪ್ರತಿಯೊಬ್ಬ ಭಾರತೀಯನಿಗಾಗಿ ದುಡಿಯುತ್ತಾರೆ ಎಂದು ರಸ್ತೆಯ ಬದಿಯಲ್ಲಿರುವ ಅಂಗಡಿಯ ಮಾಲೀಕ ಓಂ ದತ್ತ್ ಘೋಷಣೆಗಳನ್ನು ಕೂಗಿದರು.
 
ಬ್ಲ್ಯೂ ಜಾಕೆಟ್ ಮತ್ತು ಶರ್ಟ್ ಧರಿಸಿದ್ದ ಮೋದಿ ಜನಸಮೂಹವನ್ನು ಕಂಡು ಕಾರಿನಿಂದ ಹೊರಬಂದು ಅಭಿಮಾನಿಗಳತ್ತ ಕೈ ಬೀಸಿದಾಗ ಅನೇಕ ಕಾರ್ಯಕರ್ತರು ಆ ದೃಶ್ಯವನ್ನು ಮೊಬೈಲ್‌‌ಗಳಲ್ಲಿ ಸೆರೆಹಿಡಿದರು. 
 
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಹೊಸ ಉದ್ಯೋಗ ಸೃಷ್ಠಿ, ಅಭಿವೃದ್ಧಿ ಮತ್ತು ಪಾರದರ್ಶಕ ಸರಕಾರ ನೀಡುವ ಭರವಸೆಗೆ ಸ್ಪಂದಿಸಿದ ಜನತೆ 30 ವರ್ಷಗಳ ನಂತರ ಮೊದಲ ಬಾರಿಗೆ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

Show comments