Webdunia - Bharat's app for daily news and videos

Install App

ಸಿದ್ದುಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆಯಿಲ್ಲ: ಬಿಜೆಪಿ

Webdunia
ಶುಕ್ರವಾರ, 16 ಮೇ 2014 (18:31 IST)
ಕಾಂಗ್ರೆಸ್ ಸೋಲಿನ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಿನಾಮೆ ನೀಡಲಿ ಎಂದು ಪ್ರತಿಪಕ್ಷದ ನಾಯಕ ಜಗದೇಶ್ ಶೆಟ್ಟರ್ ಅವರು ಶುಕ್ರವಾರ ಹೇಳಿದ್ದಾರೆ.
 
ಫಲಿತಾಂಶದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಶೆಟ್ಟರ್, ನಿರೀಕ್ಷೆಯಂತೆ ಬಿಜೆಪಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲವು ಕಂಡಿದೆ. ಆದರೆ ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಸರ್ಕಾರದ ಆಡಳಿತ ವೈಫಲ್ಯಕ್ಕೆ ಜನರು ತಕ್ಕ ಉತ್ತರ ನೀಡಿದ್ದಾರೆ. ಆಸ್ಸಾಂ ಮುಖ್ಯಮಂತ್ರಿ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಸೋಲಿಗೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಪದತ್ಯಾಗ ಮಾಡಲಿ ಎಂದಿದ್ದಾರೆ.
 
ಮೋದಿ ಪ್ರಧಾನಿಯಾದರೆ ದೇಶ ತೊರೆಯುವುದಾಗಿ ಕೆಲವರು ಹೇಳಿಕೆ ನೀಡಿದ್ದರು. ಈಗೇನು ಮಾಡಬೇಕು ಎಂಬುದು ಅವರ ವಿವೇಚನೆಗೆ ಬಿಟ್ಟಿದ್ದು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಒಡೆದು ಹೋಗಿದ್ದ ಬಿಜೆಪಿ ಈ ಸಲ ಒಗ್ಗಟ್ಟಾಗಿ ಎಲ್ಲರ ಬಳಿ ಹೋಗಿದ್ದರ ಫಲಿತಾಂಶ ಇದು. ರಾಜ್ಯದಲ್ಲಿ ಮೋದಿ ಅಲೆ ನಡೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಪರಮೇಶ್ವರ ಹೇಳಿದ್ದರು. ಇದು ಅಲೆಯಲ್ಲ ಸುನಾಮಿ. ಯುಪಿಎ ಸರ್ಕಾರದ ವೈಫಲ್ಯ, ಕಾಂಗ್ರೆಸ್ ಬಗ್ಗೆ ಇದ್ದ ಆಕ್ರೋಶ ಹಾಗೂ ಮೋದಿ ಅಲೆಯ ಪರಿಣಾಮ ಬಿಜೆಪಿ ಜಯಭೇರಿ ಬಾರಿಸಿದೆ ಎಂದು ಶೆಟ್ಟರ್ ಹೇಳಿದರು.


ಚುನಾವಣೆ ಫಲಿತಾಂಶಕ್ಕಾಗಿ ಕ್ಲಿಕ್ಕಿಸಿ


http://elections.webdunia.com/karnataka-loksabha-election-results-2014.htm


http://elections.webdunia.com/Live-Lok-Sabha-Election-Results-2014-map.htm
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments