ಸಿದ್ದುಗೆ ತವರಿನಲ್ಲೇ ಮುಖಭಂಗ: ಬಿಜೆಪಿ ಅಭ್ಯರ್ಥಿಗೆ ಗೆಲುವು

Webdunia
ಶುಕ್ರವಾರ, 16 ಮೇ 2014 (18:17 IST)
ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಪತ್ರಕರ್ತ ಪ್ರತಾಪ್ ಸಿಂಹ್ ಅವರು ಹಾಲಿ ಸಂಸದ, ಕಾಂಗ್ರೆಸ್ ಅಭ್ಯರ್ಥಿ ಎಚ್.ವಿಶ್ವನಾಥ್ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ. ತವರು ಜಿಲ್ಲೆಯ ಸೋಲಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀವ್ರ ಮುಖಭಂಗವಾಗಿದೆ.
 
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿರುವುದರಿಂದ ತವರು ಜಿಲ್ಲೆ ಮೈಸೂರಿನಲ್ಲಿ ಕಾಂಗ್ರೆಸ್ ಗೆಲ್ಲಿಸಿಕೊಳ್ಳುವುದು ಅನಿವಾರ್ಯವಾಗಿತ್ತು. ಆದರೆ ಅವರು ಎಷ್ಟೇ ಪ್ರಯತ್ನ ಮಾಡಿದರೂ ಗೆಲುವು ತಮ್ಮದಾಗಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ.
 
 
ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೃಷ್ಣ್ಣರಾಜ, ಚಾಮರಾಜ, ನರಸಿಂಹರಾಜ, ಹುಣಸೂರು ಹಾಗೂ ಪಿರಿಯಾಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರೇ ಇದ್ದಾರೆ. ಚಾಮುಂಡೇಶ್ವರಿಯಲ್ಲಿ ಮಾತ್ರ ಜೆಡಿಎಸ್ ಶಾಸಕರಿದ್ದಾರೆ. ಮೈಸೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಮಡಿಕೇರಿ ಮತ್ತು ವೀರಾಜಪೇಟೆಯಲ್ಲಿ ಬಿಜೆಪಿ ಶಾಸಕರಿದ್ದಾರೆ.
 
ಸ್ವತಃ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿರುವುದು, ಐವರು ಶಾಸಕರಿರುವುದು ಮತ್ತು ಜಿಲ್ಲೆಯನ್ನು ಇಬ್ಬರು ಸಚಿವರು ಪ್ರತಿನಿಧಿಸುತ್ತಿರುವುದು, ಕಾಂಗ್ರೆಸ್‌ನಿಂದ ಹಿಂದುಳಿದ ಕುರುಬ ಜನಾಂಗಕ್ಕೆ ಸೇರಿದ ವಿಶ್ವನಾಥ್ ಅಭ್ಯರ್ಥಿ ಆಗಿರುವುದು, ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಒಕ್ಕಲಿಗ ಜನಾಂಗಕ್ಕೆ ಸೇರಿದವರಾಗಿದ್ದರಿಂದ ಮತಗಳ ವಿಭಜನೆಯಾಗಿ ಕಾಂಗ್ರೆಸ್ ಗೆಲುವು ಸುಲಭ ಎಂದು ಎಣಿಸಲಾಗಿತ್ತು. ಆದರೆ ಕಾಂಗ್ರೆಸ್ ಒಂದು ಪ್ರಬಲ ವರ್ಗಧ ವಿರೋಧ, ಮೋದಿ ಅಲೆಯಲ್ಲಿ ಕೊಚ್ಚಿ ಹೋಗಿದೆ.


ಚುನಾವಣೆ ಫಲಿತಾಂಶಕ್ಕಾಗಿ ಕ್ಲಿಕ್ಕಿಸಿ


http://elections.webdunia.com/karnataka-loksabha-election-results-2014.htm


http://elections.webdunia.com/Live-Lok-Sabha-Election-Results-2014-map.htm

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೀಗೂ ಕಳ್ಳತನ ಮಾಡ್ತಾರೆ ಹುಷಾರ್... ಮೊಬೈಲ್, ಬ್ಯಾಗ್ ಎಗರಿಸಲು ಖದೀಮ ಮಾಡಿದ ಪ್ಲ್ಯಾನ್ ನೋಡಿದ್ರೆ ಶಾಕ್ Video

ಅಧಿಕಾರ ಕಳೆದುಕೊಂಡ ಮಮತಾ ಬ್ಯಾನರ್ಜಿಗೆ ಕಾಳಿಘಾಟ್ ನಲ್ಲಿ ಜನ ಕ್ಯಾರೇ ಎನ್ನಲಿಲ್ಲ video

ರಸ್ತೆ ಬದಿ ಕಾರು ನಿಲ್ಲಿಸಿ ಡೋರ್ ತೆಗೆಯುವ ಮೊದಲು ಈ ವಿಡಿಯೋ ತಪ್ಪದೇ ನೋಡಿ

ರಾಜೀನಾಮೆ ವಾಪಸ್ ಕೊಡ್ತೀರಾ ಎಂದಿದ್ದಕ್ಕೆ ರಾಮಲಿಂಗಾ ರೆಡ್ಡಿ ಶಾಕಿಂಗ್ ರಿಯಾಕ್ಷನ್

ಚೈಲ್ಡ್ ಕೇರ್ ಸೆಂಟರ್ ನಲ್ಲಿ ಆಯಾ ಕ್ರೌರ್ಯ: ಪುಟಾಣಿಗೆ ಹೇಗೆಲ್ಲಾ ಚಿತ್ರಹಿಂಸೆ ನೀಡಿದ್ಳು Video ನೋಡಿ

Show comments