Webdunia - Bharat's app for daily news and videos

Install App

ನಾಳೆ ತಮಿಳುನಾಡು, ಪುದುಚೇರಿಯಲ್ಲಿ ಲೋಕಸಭೆ ಚುನಾವಣೆ ಮತದಾನ

Webdunia
ಬುಧವಾರ, 23 ಏಪ್ರಿಲ್ 2014 (19:40 IST)
ನವದೆಹಲಿ: ಗುರುವಾರ ಲೋಕಸಭೆಗೆ 9ನೇ ಹಂತದ ಚುನಾವಣೆ ನಡೆಯಲಿದ್ದು, 117 ಕ್ಷೇತ್ರಗಳಲ್ಲಿ 18 ಕೋಟಿಗೂ ಹೆಚ್ಚು ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಲಿದ್ದಾರೆ. 11 ರಾಜ್ಯಗಳು ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುವ ಚುನಾವಣೆಯಲ್ಲಿ 2076 ಅಭ್ಯರ್ಥಿಗಳ ಹಣೆಬರಹ ಮತಪೆಟ್ಟಿಗೆಗಳಲ್ಲಿ ಭದ್ರವಾಗಿ ಉಳಿಯಲಿದೆ.

117 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 37 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದು, ಬಿಜೆಪಿ 24 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಎಐಎಂಡಿಎಂಕೆಯ ಭದ್ರಕೋಟೆಯನ್ನು ಮುರಿಯಲು ಬಿಜೆಪಿಗೆ ಸಾಧ್ಯವಾಗುವುದೇ ಎನ್ನುವುದು ಯಕ್ಷಪ್ರಶ್ನೆಯಾಗಿದೆ.

ತಮಿಳುನಾಡಿನಲ್ಲಿ 39 ಕ್ಷೇತ್ರಗಳಲ್ಲಿ ಮತ್ತು ಪುದುಚೇರಿಯ ಒಂದು ಕ್ಷೇತ್ರದಲ್ಲಿ ನಾಳೆ ಮತದಾನ ನಡೆಯಲಿದೆ. ತಮಿಳುನಾಡಿನಲ್ಲಿ ದಯಾನಿಧಿ ಮಾರನ್, ಎ.ರಾಜಾ, ಡಿಎಂಕೆ ನಾಯಕ ಟಿ.ಆರ್. ಬಾಲು, ವಿತ್ತ ಸಚಿವ ಚಿದಂಬರಂ ಪುತ್ರ ಕಾರ್ತಿ, ಡಿಎಂಕೆ ನಾಯಕ ವೈಕೋ ಮತ್ತು ಕೇಂದ್ರ ಸಚಿವ ನಾರಾಯಣಸ್ವಾಮಿ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು. ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಕ್ರಮವಾಗಿ 12 ಮತ್ತು 7 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments