Webdunia - Bharat's app for daily news and videos

Install App

ಜಾತಿ ಕುರಿತು ಆರೋಪ; ಹೊರಟ್ಟಿ ಹೀಗ್ಯಾಕೆ ಹೇಳಿದ್ರು?

Webdunia
ಭಾನುವಾರ, 21 ಏಪ್ರಿಲ್ 2019 (15:18 IST)
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರು ವಿನಾಕಾರಣ ಜಾತಿ ರಾಜಕಾರಣ ಮಾಡುತ್ತಿದ್ದಾರೆ. ಹೀಗಂತ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ದೂರಿದ್ದಾರೆ.

ಬಿಜೆಪಿಯ ಶಾಸಕ ಅರವಿಂದ ಬೆಲ್ಲದ ಜಾತಿಯ ಕುರಿತಾಗಿ ಸಭೆ ನಡೆಸಿ ಮೈತ್ರಿ ಪಕ್ಷದ ಅಭ್ಯರ್ಥಿ ವಿನಯ ಕುಲಕರ್ಣಿ ಬಗ್ಗೆ ಆಪಾದನೆ ಮಾಡುವುದು ಸರಿಯಲ್ಲ ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಲಿಂಗಾಯತ ಧರ್ಮದ ಹೋರಾಟದ ಅಸ್ತ್ರವನ್ನು ಹಿಡಿದು ಬಿಜೆಪಿಯವರು ರಾಜಕಾರಣ ಮಾಡುತ್ತಿರುವುದು ಖಂಡನೀಯವಾಗಿದೆ. ಅಲ್ಲದೇ ಮಠ ಮಾನ್ಯಗಳು ಎಲ್ಲರಿಗೂ ಸಮಾನವಾಗಿದೆ.

ಈ ಹಿನ್ನೆಲೆಯಲ್ಲಿ ಬಿಜೆಪಿಯವರು ಮೈತ್ರಿ ಪಕ್ಷದ ಕುರಿತು ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ ಎಂದು ಕಿಡಿಕಾರಿದರು. ಪ್ರಹ್ಲಾದ್ ಜೋಶಿಯವರಿಂದ ಲಿಂಗಾಯತ ಧರ್ಮಕ್ಕೆ ಅನ್ಯಾಯವಾಗಿದೆ ಎಂದಿರುವ ವಿನಯ ಕುಲಕರ್ಣಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಕಾಂಗ್ರೆಸ್ ಪಕ್ಷ ಲಿಂಗಾಯತ ಧರ್ಮವನ್ನು ತುಳಿಯುತ್ತಿದ್ದಾರೆ ಎಂದು ಹೇಳಿಕೆ ನೀಡಿರುವುದಕ್ಕೆ ವಿನಯ ಕುಲಕರ್ಣಿ ಪ್ರತಿಕ್ರಿಯೆ ನೀಡಿದ್ದಾರೆ ವಿನಃ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಪಕ್ಷ ಜಾತ್ಯಾತೀತ ರಾಜಕೀಯ ಪಕ್ಷಗಳಾಗಿವೆ.

ಧರ್ಮ ಹೋರಾಟವೇ ಬೇರೆ, ರಾಜಕೀಯವೇ ಬೇರೆ ಒಂದಕ್ಕೊಂದು ಸಂಬಂಧವಿಲ್ಲ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments