3 ಬಾರಿ ಸಿಎಂ ಸ್ಥಾನ ತಪ್ಪಿದೆ ಅಂತ ಖರ್ಗೆ ಹೇಳಿದ್ಯಾಕೆ?

Webdunia
ಶುಕ್ರವಾರ, 12 ಏಪ್ರಿಲ್ 2019 (18:07 IST)
ನನಗೂ ಮೂರು ಸಲ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಿದೆ. ಆದರೆ ನಾನು ಬಹಿರಂಗವಾಗಿ ಎಲ್ಲೂ ಮಾತನಾಡಿಲ್ಲ. ಹೀಗಂತ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಿರಿಯ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಲಬುರ್ಗಿಯ ಪಟ್ಟಣ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಪ್ರಚಾರದ ವೇಳೆ ಹೇಳಿಕೆ ನೀಡಿದ್ದು, ನನಗೂ ಮೂರು ಸಲ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಿದೆ. ಆದರೆ ನಾನು ಬಹಿರಂಗವಾಗಿ ಎಲ್ಲೂ ಮಾತನಾಡಿಲ್ಲ. ನನಗೆ ಪಕ್ಷ ಮತ್ತು ಅದರ ಸಿದ್ಧಾಂತಗಳು ಮುಖ್ಯ. ಆದರೆ ಕಾಂಗ್ರೆಸ್ ಪಕ್ಷದಿಂದ ಹೊರಗೆ ಹೋದವರು ಸಂವಿಧಾನ ವಿರೋಧಿ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಟೀಕೆ ಮಾಡಿದರು.

ಮಂತ್ರಿ ಸ್ಥಾನ ಸಿಕ್ಕಿಲ್ಲ ಎಂದು ಮಾಲಿಕಯ್ಯ ಗುತ್ತೇದಾರ್, ಉಮೇಶ ಜಾಧವ್ ಮತ್ತಿತರರು ಕಾಂಗ್ರೆಸ್ ತೊರೆದಿರುವುದಕ್ಕೆ ಪರೋಕ್ಷ ಟಾಂಗ್ ನೀಡಿದ್ರು. ಕಾಂಗ್ರೆಸ್ ತೊರೆದವರಿಗೆ ಟಾಂಗ್ ಕೊಟ್ಟ ಖರ್ಗೆ, ನನ್ನ ಅಭಿವೃದ್ಧಿ ಕೆಲಸಗಳೇ ನನಗೆ ಗೆಲುವು ತಂದುಕೊಡುತ್ತದೆ. ನನ್ನ ವಿರುದ್ಧ ಹೊರಟರು ತಾವೇ ಸೋತು ಸುಣ್ಣವಾಗಿದ್ದಾರೆ. ಅಂಥವರು ನನ್ನನ್ನು ಸೋಲಿಸುವ ಮಾತನಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ರು.

ಕಲಬುರ್ಗಿಗೆ ಪ್ರಧಾನಿ ನರೇಂದ್ರ ಮೋದಿ ಬಂದಾಗ ನನ್ನ ಬಗ್ಗೆ ಏನೂ ಮಾತನಾಡಲಿಲ್ಲ. ಆದರೆ ಮೋದಿಯ ಇಲ್ಲಿನ ಮರಿಗಳು ನನ್ನ ಬಗ್ಗೆ ಮಾತನಾಡುತ್ತಿವೆ. ಹೀಗಂತ ಪರೋಕ್ಷವಾಗಿ ತಮ್ಮ ವಿರೋಧಿಗಳಿಗೆ ಮುಟ್ಟಿನೋಡಿಕೊಳ್ಳುವಂತೆ ಖರ್ಗೆ ತಿರುಗೇಟು ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ ಉಗ್ರ ದಾಳಿ ನಡೆದಿದ್ದು ಇದೇ ದಿನ: ಅಂದು ಏನಾಗಿತ್ತು ಇಲ್ಲಿದೆ ವಿವರ

ಬಡತನ, ಕಷ್ಟ ಬಾಳಾ ನೋಡೀನ್ರೀ, ಅದು ಸಮಾಜದೊಳಗೆ ಯಾರಿಗೂ ಬರಬಾರದು ಎಂದಿದ್ದ ಮಹಂತೇಶ್ ಬೀಳಗಿ

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್: ಹೀಗೊಂದು ಬಾಂಬ್ ಹಾಕಿದ್ದು ಯಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

ಮುಂದಿನ ಸುದ್ದಿ
Show comments