Select Your Language

Notifications

webdunia
webdunia
webdunia
webdunia

ಬಿಜೆಪಿಗೆ ಮತ ನೀಡಿ ಎಂದ ಮೈತ್ರಿ ಸರ್ಕಾರದ ನಾಯಕರು

ಬಿಜೆಪಿಗೆ ಮತ ನೀಡಿ ಎಂದ ಮೈತ್ರಿ ಸರ್ಕಾರದ ನಾಯಕರು
ಬೆಂಗಳೂರು , ಶನಿವಾರ, 13 ಏಪ್ರಿಲ್ 2019 (09:48 IST)
ಬೆಂಗಳೂರು : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ ಮೈತ್ರಿ ಸರ್ಕಾರದ ನಾಯಕರು ಮಾತಿನ ಭರದಲ್ಲಿ ಬಿಜೆಪಿಗೆ ಮತ ನೀಡಿ ಎಂದು ಎಡವಟ್ಟು ಹೇಳಿಕೆ ನೀಡಿದ್ದಾರೆ.


ಹೌದು. ಮೈಸೂರು ಜಿಲ್ಲೆಯಲ್ಲಿ ಮೈತ್ರಿ ಅಭ್ಯರ್ಥಿ ಪರ ನಡೆದ ಬಹಿರಂಗ ಪ್ರಚಾರ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್‍.ಡಿ ದೇವೇಗೌಡ ಅವರು ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಹಾಗೂ ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಧೃವನಾರಾಯಣ್ ಅವರನ್ನು ಗೆಲ್ಲಿಸಿ ಎಂದು ಭಾಷಣ ನಡುವೆ ಬಾಯ್ತಪ್ಪಿ ಹೇಳಿದ್ದಾರೆ.


ಅಲ್ಲದೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ 'ಮೈತ್ರಿ' ಅಭ್ಯರ್ಥಿ ಹಾಗೂ ಸೋದರ ಡಿಕೆ ಸುರೇಶ್ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ ಸಚಿವ ಡಿಕೆ ಶಿವಕುಮಾರ್ ಬಿಜೆಪಿಗೆ ಹೆಚ್ಚು ಮತ ನೀಡಿ ಎಂದು ಹೇಳಿ ಎಡವಟ್ಟು ಮಾಡಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

Share this Story:

Follow Webdunia kannada

ಮುಂದಿನ ಸುದ್ದಿ

ಕ್ಯಾಂಡಲ್ ಮಾರ್ಚ್ ಮಾಡಿದ್ದು ಮತದಾನ ಜಾಗೃತಿಗಾಗಿ...