Webdunia - Bharat's app for daily news and videos

Install App

ಬಿಜೆಪಿಯವರನ್ನು ನಾಯಿಗೆ ಹೋಲಿಸಿದ ಆನಂದ್ ಅಸ್ನೋಟಿಕರ್

Webdunia
ಭಾನುವಾರ, 14 ಏಪ್ರಿಲ್ 2019 (13:35 IST)
ಕಾರವಾರ : ಬಿಜೆಪಿ ನಾಯಿಗಳು ಬೊಗಳುತ್ತಿರಲಿ ನಾನು ಆನೆಯಂತೆ ಮುಂದೆ ಹೋಗುತ್ತೇನೆ ಎಂದು ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ಆನಂದ್ ಅಸ್ನೋಟಿಕರ್ ಹೇಳಿಕೆ ನೀಡಿದ್ದಾರೆ.


ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಮರಿ ಪುಡಾರಿಗಳನ್ನು ಬಿಟ್ಟು ಬೊಗಳುವಂತಹ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರು ಐಟಿಯವರನ್ನು ಬಿಟ್ಟು ನನ್ನ ಸಂಬಂಧಿಕರು ಹಾಗೂ ಸ್ನೇಹಿತರ ಮನೆಯ ಮೇಲೆ ದಾಳಿ ಮಾಡಿಸಿ ಹೆದರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ನಾನು ಹೆದರುವುದಿಲ್ಲ. ಜನರ ಮುಂದೆ ಹೋಗುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಅನಂತ್ ಕುಮಾರ್ ಹೆಗ್ಡೆ ತನ್ನ ತಲೆಯಲ್ಲಿರುವ ಎಲ್ಲಾ ಅಸ್ತ್ರವನ್ನು ನನ್ನ ಮೇಲೆ ಪ್ರಯೋಗ ಮಾಡುತ್ತಿದ್ದಾರೆ. ನನ್ನನ್ನು ಮನೆಯಲ್ಲಿ ಕೂರಿಸುವ ವಿಚಾರ ನಡೆಯುತ್ತಿದೆ. ಬಿಜೆಪಿಯವರ ಕುತಂತ್ರವಿದು. ಅವರ ಅಸ್ತ್ರಕ್ಕೆ ನಾನು ಹೆದರುವುದಿಲ್ಲ. ಆನೆ ಮುಂದೆ ಹೋಗುತ್ತಿರಬೇಕು ನಾಯಿ ಬೊಗಳುತ್ತಿರಬೇಕು. ಹಾಗೆ ನಾನು ಮುಂದೆ ಹೋಗುತ್ತಿದ್ದೇನೆ ಬಿಜೆಪಿ ನಾಯಿಗಳು ಬೊಗಳುತ್ತಿದೆ ಎಂದು ಕಾರವಾರದಲ್ಲಿ ಆನಂದ್ ಅಸ್ನೋಟಿಕರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ, ಪತಿಯ ಅಂತ್ಯಕ್ರಿಯೆ ವೇಳೆ ಪತ್ನಿಗಾಗಿದ್ದೇನು

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮುಂದಿನ ಸುದ್ದಿ
Show comments