Select Your Language

Notifications

webdunia
webdunia
webdunia
webdunia

ಬೆಂಗಳೂರು ದಕ್ಷಿಣ ಅಭ್ಯರ್ಥಿ ತುಮಕೂರಲ್ಲಿ ಪ್ರತ್ಯಕ್ಷ

ಬೆಂಗಳೂರು ದಕ್ಷಿಣ ಅಭ್ಯರ್ಥಿ ತುಮಕೂರಲ್ಲಿ ಪ್ರತ್ಯಕ್ಷ
ತುಮಕೂರು , ಗುರುವಾರ, 4 ಏಪ್ರಿಲ್ 2019 (17:16 IST)
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ.

ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದುಗೆ ದರ್ಶನ ಪಡೆದಿದ್ದಾರೆ ತೇಜಸ್ವಿ ಸೂರ್ಯ. ಮೊದಲ ಬಾರಿಗೆ ಮಠಕ್ಕೆ ಭೇಟಿ ನೀಡಿದ ಕಮಲಪಡೆಯ ಯುವನಾಯಕ ಹಾಗೂ ಅಭ್ಯರ್ಥಿಗೆ ಬಿಜೆಪಿ ಮಾಜಿ ಸಚಿವ ಸೋಮಣ್ಣ ಸಾಥ್ ನೀಡಿದ್ರು.

ಅಚ್ಚರಿಯ ಬೆಳವಣಿಗೆಯಲ್ಲಿ ಟಿಕೆಟ್ ಗಿಟ್ಟಿಸಿಕೊಂಡಿರುವ ತೇಜಸ್ವಿ ಸೂರ್ಯ ಚುನಾವಣೆ ಅಖಾಡಕ್ಕೆ ಧುಮುಕಿದ್ದಾರೆ. ದಿ.ಅನಂತ್ ಕುಮಾರ್ ಪತ್ನಿ ತೇಜಸ್ವಿನಿಗೆ ಟಿಕೆಟ್ ನೀಡುವ ಮನಸ್ಥಿತಿಯಲ್ಲಿದ್ದರು ಬಿಜೆಪಿ ನಾಯಕರು.

ಆ ಮೂಲಕ ಅನುಕಂಪದ ಅಲೆಯಲ್ಲಿ ಗೆಲ್ಲುವ ಹುಮ್ಮಸ್ಸಿನಲ್ಲಿದ್ದ ಬೆಂಗಳೂರು ಭಾಗದ ನಾಯಕರಿದ್ದರು. ಆದರೆ ರಾಜ್ಯ ನಾಯಕರ ನಿರ್ಧಾರಕ್ಕೆ ಹೈಕಮಾಂಡ್ ಶಾಕ್ ನೀಡಿ ತೇಜಸ್ವಿಗೆ ಟಿಕೆಟ್ ನೀಡಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ನೂರು ಕಾಂಗ್ರೆಸ್ ಬಾವುಟ ಹಿಡಿದು ಸುಮಲತಾ ಪರ ಪ್ರಚಾರ ಮಾಡ್ತೇವಿ…