Webdunia - Bharat's app for daily news and videos

Install App

ದೇವೇಗೌಡ- ಕುಮಾರಸ್ವಾಮಿಯ ನಡುವಿನ ಜಗಳ ಬೀದಿಗೆ ತಂದ ಬಿಜೆಪಿ ಶಾಸಕ

Webdunia
ಸೋಮವಾರ, 15 ಏಪ್ರಿಲ್ 2019 (10:22 IST)
ಬೆಂಗಳೂರು : ಈ ಹಿಂದೆ ಮಾಜಿ ಪ್ರಧಾನಿ ದೇವೇಗೌಡರನ್ನು ಅವರ ಪುತ್ರ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮನೆಯಿಂದ ಆಚೆಗೆ ಹಾಕಿದ್ದರು ಎಂದು ಚಿಕ್ಕನಾಯಕನಹಳ್ಳಿ ಬಿಜೆಪಿ ಶಾಸಕ ಮಾಧುಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ತಂದೆ, ಮಗನ ನಡುವೆ ಭಿನ್ನಾಭಿಪ್ರಾಯವಾಗಿದ್ದ ಕಾರಣ ಕುಮಾರಸ್ವಾಮಿ ದೇವೇಗೌಡರನ್ನು ಮನೆಯಿಂದ ಹೊರಗೆ ಹಾಕಿದ್ದರು. ಕುಮಾರ ಪಾರ್ಕ್ ಬಳಿ ಬಾಡಿಗೆ ಮನೆಯೊಂದರಲ್ಲಿ ದೇವೇಗೌಡರು ವಾಸವಾಗಿದ್ದರು. ಆಗ ಅವರ ತಂದೆಗೆ ಊಟ ಕೊಟ್ಟಿದ್ದು ನಾವು, ಅವರ ಮಕ್ಕಳಲ್ಲ. ಆದರೆ ಈಗ ತಮ್ಮ ತಂದೆಯನ್ನೇ ಮನೆಯಿಂದ ಹೊರಹಾಕಿದ ಕುಮಾರಸ್ವಾಮಿ ನನ್ನ ಬಗ್ಗೆ ಮಾತನಾಡುತ್ತಾರೆ. ಕುಮಾರಸ್ವಾಮಿ ಈಗ ನನ್ನ ಬಳಿ ಬರಲಿ, ಯಾಕಪ್ಪ ನಿಮ್ಮ ಅಪ್ಪನನ್ನು ಹೊರಗೆ ಹಾಕಿದ್ದೆ ಎಂದು ಅವರಿಗೆ ಕೇಳುತ್ತೇನೆ ಎಂದು  ಮಾಧುಸ್ವಾಮಿ ಕಿಡಿಕಾರಿದ್ದಾರೆ.

 

ದೇವೇಗೌಡರು ಭಾಷಣ ಮಾಡುವಾಗ ಕಲ್ಲಲ್ಲಿ ಒಡೆದಿದ್ದರು. ನಾನು ಎದೆ ಕೊಟ್ಟು ನಿಂತಿದ್ದೆ. ಆಗ ಗೌಡರು ನನ್ನನ್ನು ತಬ್ಬಿಕೊಂಡು ಅತ್ತಿದ್ದರು. ನನ್ನ ಮಕ್ಕಳಾಗಿದ್ದರೂ ಈ ರೀತಿ ಏಟು ತಿನ್ನುತ್ತಿರಲಿಲ್ಲ ಎಂದು ಹೇಳಿದ್ದರು. ವಿ.ಎಸ್. ಉಗ್ರಪ್ಪ, ದೇವೇಗೌಡರ ಬೆನ್ನು ಉಜ್ಜುತ್ತಿದ್ದರು. ಗೌಡರ ಮಾನಸಿಕ ಪುತ್ರರೆಂದೇ ಹೇಳಲಾಗಿದ್ದ ಬಿ.ಎಲ್. ಶಂಕರ್ ಪಕ್ಷವನ್ನೇ ಬಿಟ್ಟರು. ಹೀಗೆ ಅನೇಕರು ದೂರವಾಗಿದ್ದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments