Webdunia - Bharat's app for daily news and videos

Install App

ಯುವಕರೇ ಮೋದಿ ಮೋದಿ ಅಂತ ಕೂಗಿ ದೇಶ ಹಾಳು ಮಾಡಬೇಡಿ- ಸಿಎಂ ಮನವಿ

Webdunia
ಮಂಗಳವಾರ, 9 ಏಪ್ರಿಲ್ 2019 (09:02 IST)
ಬೆಂಗಳೂರು : ಯುವಕರು ಮೋದಿ ಮೋದಿ ಅಂತ ಕೂಗಿ ದೇಶ ಹಾಳು ಮಾಡಬೇಡಿ ಎಂದು ಸಿಎಂ ಕುಮಾಸ್ವಾಮಿ ಮನವಿ ಮಾಡಿದ್ದಾರೆ.

ಬೆಂಗಳೂರು ಉತ್ತರ ಕ್ಷೇತ್ರ ಮೈತ್ರಿ ಅಭ್ಯರ್ಥಿ ಕೃಷ್ಣಬೈರೇಗೌಡ ಪರ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಕಳೆದ 5 ವರ್ಷದ ಆಡಳಿತದಲ್ಲಿ ಘೋಷಣೆ ಮಾಡದ ತುರ್ತು ಪರಿಸ್ಥಿತಿ ಜಾರಿಯಾಗಿತ್ತು. ಅವರ ವಿರುದ್ಧ ಮಾತನಾಡಿದರೆ ಕೇಂದ್ರದ ಸಂಸ್ಥೆಗಳ ಮೂಲಕ ಮಟ್ಟ ಹಾಕುತ್ತಾರೆ. ಈಗಿರುವ ಕೇಂದ್ರ ಚುನಾವಣೆ ಆಯೋಗ (ಇಸಿ) ನಗೆ ಪಾಟಲಿನ ಆಯೋಗವಾಗಿದೆ. ಈಗಿನ ಚುನಾವಣಾ ಆಯೋಗವೇ ಸರಿ ಇಲ್ಲ ಎಂದು ಆರೋಪಿಸಿದ್ದಾರೆ.

 

ಕೇಂದ್ರ ಸರ್ಕಾರ ಸರ್ವ ಶಿಕ್ಷಣ ಅಭಿಯಾನದ ಹಣವನ್ನು ಇವತ್ತು ನಿಲ್ಲಿಸಿದೆ. ಮನ್ ಕೀ ಬಾತ್ ಭಾಷಣದಲ್ಲಿ ಮಾತ್ರ ಭೇಟಿ ಬಚಾವ್ ಕಾರ್ಯಕ್ರಮ ಎನ್ನುತ್ತಾರೆ. ಆದರೆ ಯಾವ ಭೇಟಿ ಬಚಾವ್ ಮಾಡಿದ್ದಾರೋ ಗೊತ್ತಿಲ್ಲ. ದೇಶದ ಭದ್ರತೆ ವಿಚಾರ ಇಟ್ಟುಕೊಂಡು ಈಗ ಮತ ಕೇಳುತ್ತಿದ್ದು, 5 ವರ್ಷದ ಸಾಧನೆಯ ಬಗ್ಗೆ ಮಾತನಾಡುತ್ತಿಲ್ಲ. ದೇಶದ ಭದ್ರತೆಯನ್ನ ಒಬ್ಬರೇ ರಕ್ಷಣೆ ಮಾಡಿದಂತೆ ಹೇಳಿಕೊಂಡು ಮತ ಕೇಳುತ್ತಿದ್ದಾರೆ ಎಂದು ಪ್ರದಾನಿ ಮೋದಿ ವಿರುದ್ಧ ಸಿಎಂ ಕಿಡಿಕಾರಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments