ಚುನಾವಣಾ ಆಯೋಗದವರು ನನ್ನನ್ನೇ ಟಾರ್ಗೆಟ್ ಮಾಡಿದ್ದಾರೆ: ಸಿಎಂ ಎಚ್ ಡಿಕೆ ಆರೋಪ

Webdunia
ಶುಕ್ರವಾರ, 5 ಏಪ್ರಿಲ್ 2019 (10:34 IST)
ಬೆಂಗಳೂರು: ಚುನಾವಣಾ ಆಯೋಗದವರು ನನ್ನನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.


ಸಿಎಂ ಕುಮಾರಸ್ವಾಮಿ ಪ್ರಜ್ವಲ್ ರೇವಣ್ಣ ಪರ ಹಾಸನದಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗುವ ವೇಳೆ ಚುನಾವಣಾಧಿಕಾರಿಗಳು ಅವರ ಕಾರನ್ನು ತಡೆಹಿಡಿದು ಮಾಮೂಲಾಗಿ ತಪಾಸಣೆ ನಡೆಸಿದ್ದಾರೆ.

ಈ ಘಟನೆ ಬೆನ್ನಲ್ಲೇ ಸಿಎಂ ಕಿರುಕುಳದ ಆರೋಪ ಮಾಡಿದ್ದಾರೆ. ಚುನಾವಣಾಧಿಕಾರಿಗಳು ಬೇಕೆಂದೇ ನನ್ನನ್ನೇ ಟಾರ್ಗೆಟ್ ಮಾಡಿದ್ದಾರೆ. ಇದರಿಂದ ಅವರಿಗೆ ಏನು ಸಿಗುತ್ತದೋ ನನಗೆ ಗೊತ್ತಿಲ್ಲ. ಆದರೂ ಪದೇ ಪದೇ ನನ್ನನ್ನೇ ಗುರಿಯಾಗಿಸಿ ಪರಿಶೀಲನೆ, ದಾಳಿ ಮಾಡಲಾಗುತ್ತಿದೆ ಎಂದು ಸಿಎಂ ಆರೋಪಿಸಿದ್ದಾರೆ.

ಆದರೆ ಚುನಾವಣಾಧಿಕಾರಿಗಳು ಇದನ್ನೆಲ್ಲಾ ತಳ್ಳಿ ಹಾಕಿದ್ದು, ಹಾಸನ ಹೆದ್ದಾರಿಯಲ್ಲಿ ಸಾಮಾನ್ಯವಾಗಿ ಎಲ್ಲಾ ವಾಹನಗಳನ್ನು ತಪಾಸಣೆ ಮಾಡುವಂತೆ ಸಿಎಂ ವಾಹನವನ್ನೂ ತಪಾಸಣೆ ನಡೆಸಲಾಗಿದೆಯಷ್ಟೇ. ಬದಲಾಗಿ ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿಗೆ ಅಂತಾರಾಷ್ಟ್ರೀಯ ಸಂಬಂಧ ನಿಭಾಯಿಸಲು ಬರಲ್ಲ: ಡಿಕೆ ಶಿವಕುಮಾರ್

ವಿಧಿಯಾಟಕ್ಕೆ ಬಲಿಯಾದ ಕುಟುಂಬ: ಚಾವಣಿ ಕುಸಿದು, ತಂದೆ, ತಾಯಿ, ಇಬ್ಬರು ಮಕ್ಕಳು ದಾರುಣ ಸಾವು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments