ಸಿಎಂ ಕುಮಾರಸ್ವಾಮಿಯಿಂದ ನೀತಿ ಸಂಹಿತೆ ಉಲ್ಲಂಘನೆ

Webdunia
ಮಂಗಳವಾರ, 2 ಏಪ್ರಿಲ್ 2019 (11:04 IST)
ತುಮಕೂರು : ಚುನಾವಣಾ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೂಡ ಸಭೆಯೊಂದರಲ್ಲಿ ಯೋಜನೆಗಳನ್ನು  ಘೋಷಣೆ ಮಾಡುವ ಮೂಲಕ ಸಿಎಂ ಕುಮಾರಸ್ವಾಮಿ ಅವರು ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.


ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು, ಒಣಗಿ ಹೋದ ತೆಂಗಿನ ಮರಕ್ಕೆ 400 ರೂ ಪರಿಹಾರ ಈಗಾಗಲೇ ಕೊಡುತಿದ್ದೇವೆ. ಅದು ಸಾಕಾಗಲ್ಲ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಜಯಚಂದ್ರ ಅವರು 400 ರಿಂದ 1000 ರೂ. ಗೆ ಏರಿಕೆ ಮಾಡಬೇಕು ಅಂದಿದ್ದಾರೆ. ಆ ಕುರಿತು ಚುನಾವಣೆ ಮುಗಿದ ಬಳಿಕ ನೋಡೋಣ ಎಂದು ಪರೋಕ್ಷವಾಗಿ 1000 ರೂ. ಕೊಡುವ ಭರವಸೆ ಸಿಎಂ ನೀಡಿದ್ದಾರೆ.


ಅಷ್ಟೇ ಅಲ್ಲದೇ ಭದ್ರಾ ಮೇಲ್ದಂಡೆ ನೀರನ್ನು ಶಿರಾ ಚಿಕ್ಕನಾಯಕನಹಳ್ಳಿಗೆ ಹರಿಸುತ್ತೇನೆ. 8 ರಿಂದ 10 ತಿಂಗಳ ಅವಕಾಶ ಕೊಡಿ. ಚಿಕ್ಕನಾಯಕನಹಳ್ಳಿ ತಾಲೂಕಿನ ಕೆರೆಕಟ್ಟೆ ತುಂಬಿಸುವ ಕೆಲಸ ಮಾಡಬೇಕಿದೆ. ನೀತಿ ಸಂಹಿತೆ ಇರುವುದರಿಂದ ಹೆಚ್ಚಿಗೆ ಹೇಳಿಕೆ ಆಗೋಲ್ಲ ಎಂದು ಹೇಳಿದ್ದರು.  ಈ ಮೂಲಕ ಸಿಎಂ ಕುಮಾರಸ್ವಾಮಿ ಅವರು ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿಎಂಸಿಯಲ್ಲಿ ಬಂಡಾಯದ ಭಾವುಟ ಹಾರಿಸಿದ ಸಂಸದರಿಂದ ಸ್ಪೀಕರ್ ಭೇಟಿ

2047ರ ವಿಕಸಿತ ಭಾರತದ ಸಂಕಲ್ಪವನ್ನು ಈಡೇರಿಸಲು ದೇಶ ಸಜ್ಜಾಗಿದೆ

ಗ್ಯಾರಂಟಿ ನಿಲ್ಲಿಸಲಾಗುತ್ತದೆ ಎಂಬ ಬಿಜೆಪಿ ಆರೋಪ ಬೆನ್ನಲ್ಲೇ ಕ್ಲಾರಿಟಿ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ಒಂದೊಂದೇ ನೆಪವೊಡ್ಡಿ ಗ್ಯಾರಂಟಿಗೆ ಫಲಾನುಭವಿಗಳ ಸಂಖ್ಯೆ ಇಳಿಸುವುವಲ್ಲಿ ಕಾಂಗ್ರೆಸ್

Video, ಬಂಗೀ ಜಂಪ್ ವೇಳೆ ಸುರಕ್ಷತಾ ಹಗ್ಗವನ್ನೇ ಹಾಕಲು ಮರೆತ ಸಿಬ್ಬಂದಿ, ಯುವತಿಯ ಕೊನೆ ಕ್ಷಣದ ವಿಡಿಯೋ ಭಯ ಹುಟ್ಟಿಸುತ್ತದೆ

ಮುಂದಿನ ಸುದ್ದಿ
Show comments