Webdunia - Bharat's app for daily news and videos

Install App

ಕಾಂಗ್ರೆಸ್ ಬಾಡಿಗೆ ಜನ ಕರೆತಂದು ಪ್ರಚಾರ ನಡೆಸ್ತಿದೆಯಂತೆ!

Webdunia
ಮಂಗಳವಾರ, 9 ಏಪ್ರಿಲ್ 2019 (18:35 IST)
ನಮ್ಮ ಪ್ರತಿಸ್ಪರ್ಧಿಗಳಿಗೆ ಯಾವುದೇ ಸ್ವತ್ತುಗಳಿಲ್ಲ. ಬಾಡಿಗೆ ಜನ ತಂದು ಪ್ರಚಾರ ಮಾಡುತ್ತಿದ್ದಾರೆ. ಹೀಗಂತ ಡಿ.ವಿ.ಸದಾನಂದಗೌಡ ವ್ಯಂಗ್ಯವಾಡಿದ್ದಾರೆ.

ನಿನ್ನೆ ನಡೆದ ಕಾರ್ಯಕ್ರಮದಲ್ಲಿ 300 ರೂ. ಚೀಟಿ ಕೊಟ್ಟು,  ಸ್ತ್ರೀ ಶಕ್ತಿ ಸಂಘಟನೆಗಳಿಂದ ಪಡೆದುಕೊಳ್ಳುವಂತೆ ಹೇಳಿದ್ದಾರೆ. ಅಂತಹ ಅಧೋಗತಿಗೆ ವಿರೋಧಿಗಳು ಹೋಗಿದ್ದಾರೆ ಎಂದರು.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಚಾರ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ದೇಶದಲ್ಲಿ ಮೋದಿ ಅವರನ್ನ ಮತ್ತೆ ಪ್ರಧಾನಿ ಮಾಡಬೇಕು ಅಂತ ಹೇಗೆ ಜನ ಇದ್ದಾರೋ ಹಾಗೇ ಈ ಕ್ಷೇತ್ರದಲ್ಲಿ ಮತದಾರ ಒಲವು ನನ್ನ ಪರ ಇದೆ ಎಂದಿದ್ದಾರೆ.

ಬುರ್ಕಾ ಹಾಕಿ ಮತ ಕೇಳಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಡಿವಿಎಸ್ ತಿರುಗೇಟು ನೀಡಿದ್ದು, ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಬುರ್ಕಾ ಹಾಕಿಬಿಟ್ಟಿದ್ದಾರೆ. ಹತ್ತು ವರ್ಷಗಳ ಪ್ರಧಾನಿ ಆದವ, ಆಟಕ್ಕೆ ಉಂಟು, ಊಟಕ್ಕಿಲ್ಲ ಎಂಬಂತೆ ಮಾಡಿದ್ದಾರೆ. ಈಗ ನಮಗೆ ಹೇಳೋದಕ್ಕೆ ಬರುತ್ತಿದ್ದಾರೆ. ನಮ್ಮ ಪ್ರಧಾನಿ ಐದು ವರ್ಷ ಕೆಲಸ ಮಾಡಿದ್ದು ನಮಗೆ ಹೆಮ್ಮೆ ಇದೆ. ಅವರ ಹೆಸರಲ್ಲಿ ಮತ ಕೇಳಲು ಧೈರ್ಯ ಇದೆ, ಅವರ ಮುಖವಾಡ ಧರಿಸಿ ಮತ ಕೇಳುತ್ತೇವೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

Shocking video: ನೆಗಡಿ ಎಂದು ಬಂದ ಪುಟ್ಟ ಮಗುವಿಗೆ ಸಿಗರೇಟು ಸೇದಲು ಹೇಳಿಕೊಟ್ಟ ವೈದ್ಯ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ