Webdunia - Bharat's app for daily news and videos

Install App

ಡಿ.ಕೆ.ಶಿ. ವಿರುದ್ಧ ಹೈಕಮಾಂಡಿಗೆ ದೂರು ನೀಡುತ್ತೇನೆ ಎಂದು ಎಂ.ಬಿ.ಪಾಟೀಲ್ ಹೇಳಿದ್ಯಾಕೆ?

Webdunia
ಶನಿವಾರ, 13 ಏಪ್ರಿಲ್ 2019 (10:05 IST)
ವಿಜಯಪುರ : ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ವಿಚಾರವಾಗಿ ಕ್ಷಮೆ ಕೇಳಿದ ಬೃಹತ್ ನೀರಾವರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಗೃಹ ಸಚಿವ ಎಂ.ಬಿ.ಪಾಟೀಲ್ ಕಿಡಿಕಾರಿದ್ದಾರೆ.


ಈ ಕುರಿತು ಮಾತನಾಡಿದ ಅವರು, ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದ ಬಗ್ಗೆ ಮಾತನಾಡಲು ಡಿ.ಕೆ.ಶಿವಕುಮಾರ್ ಅವರಿಗೆ ಏನು ಅಧಿಕಾರವಿದೆ? ಕ್ಷಮೆ ಕೇಳಲು ಅವರು ಯಾರು? ಅವರಿಗೂ ಲಿಂಗಾಯತ ಧರ್ಮಕ್ಕೂ ಏನು ಸಂಬಂಧ? ಅವರೇನು ಕೆಪಿಸಿಸಿ ಅಧ್ಯಕ್ಷರೇ? ಡಿ.ಕೆ.ಶಿವಕುಮಾರ್ ಮೊದಲು ತಮ್ಮ ಸಮುದಾಯದಲ್ಲಿರುವ ಭಿನ್ನಾಭಿಪ್ರಾಯ ಬಗೆಹರಿಸಿಕೊಳ್ಳಲಿ ಎಂದು ಗರಂ ಆಗಿ ಹೇಳಿದ್ದಾರೆ.


ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟವನ್ನು ನಾನು ಚುನಾವಣೆಯಲ್ಲಿ ಬಳಸಿಕೊಂಡಿಲ್ಲ. 2018ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿಯೂ ಈ ಬಗ್ಗೆ ಹೇಳಿರಲಿಲ್ಲ. ಆದರೆ ಡಿ.ಕೆ.ಶಿವಕುಮಾರ್ ಅವರು ಯಾಕೆ ಈ ಬಗ್ಗೆ ಪದೇ ಪದೇ ಪ್ರಸ್ತಾಪ ಮಾಡುತ್ತಿದ್ದಾರೆ? ಈ ವಿಚಾರವಾಗಿ ಈಗ ಮಾತನಾಡಿ ಪಕ್ಷಕ್ಕೆ ಮುಜುಗುರ ಉಂಟು ಮಾಡುವುದಿಲ್ಲ. ಲೋಕಸಭಾ ಚುನಾವಣೆಯ ಬಳಿಕ ಸುದ್ದಿಗೋಷ್ಠಿ ಕರೆದು ಸರಿಯಾದ ಉತ್ತರ ನೀಡುತ್ತೇನೆ. ಹಾಗೇ ಡಿ.ಕೆ.ಶಿವಕುಮಾರ್ ವಿರುದ್ಧ ಪಕ್ಷದ ನಾಯಕರಿಗೆ, ಹೈಕಮಾಂಡಿಗೆ ದೂರು ನೀಡುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆದ ಪೊಲೀಸರು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಾಂಗ್ರೆಸ್ ಅವಧಿಯಲ್ಲಿ ಮಿತಿಮೀರಿದೆ ಕಮಿಷನ್: ನಮ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿದ್ರಿ ಆರ್ ಅಶೋಕ್ ಆಕ್ರೋಶ

ಗಣೇಶನ ಮೂರ್ತಿಯನ್ನು ಮನೆಯ ಯಾವ ದಿಕ್ಕಿನಲ್ಲಿ ಕೂರಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments