Webdunia - Bharat's app for daily news and videos

Install App

ಖರ್ಗೆ ಹಣ, ಹೆಂಡ ಹಂಚುತ್ತಿದ್ದಾರೆ ಎಂದೋರಾರು?

Webdunia
ಸೋಮವಾರ, 22 ಏಪ್ರಿಲ್ 2019 (15:26 IST)
ಇದುವರೆಗೆ ಮ್ಯಾಚ್ ಫಿಕ್ಸಿಂಗ್ ನಲ್ಲಿ ಗೆಲ್ಲುತ್ತಿದ್ದ ಮಲ್ಲಿಕಾರ್ಜುನ ಖರ್ಗೆ ಈ ಬಾರಿ ಹೀನಾಯವಾಗಿ ಸೋಲಲಿದ್ದಾರೆ. ಹೆಂಡ ಮತ್ತು ಹಣವನ್ನು ಹಂಚುವ ಕೆಲಸವನ್ನು ಖರ್ಗೆ ಹಾಗೂ ಅವರ ಮಗ ಪ್ರಿಯಾಂಕ ಖರ್ಗೆ ಮಾಡುತ್ತಿದ್ದಾರೆ. ಹೀಗಂತ ವಿಧಾನ ಪರಿಷತ್ ಸದಸ್ಯರೊಬ್ಬರು ಆರೋಪ ಮಾಡಿದ್ದಾರೆ.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಎಂಎಲ್ಸಿ ಎನ್.ರವಿಕುಮಾರ್ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ್ದು, ಕಲಬುರಗಿಯಲ್ಲಿ ಬಿಜೆಪಿ ಅಭ್ಯರ್ಥಿ 1 ಲಕ್ಷ ಮತ ಅಂತರಗಳಲ್ಲಿ ಗೆಲ್ಲಲಿದ್ದಾರೆ ಎಂದರು.

ಇನ್ನು ಕಾಂಗ್ರೆಸ್ ನವರು ಕನಿಷ್ಟ 100  ಕೋಟಿ ‌ರೂ. ಖರ್ಚು ಮಾಡುತ್ತಿದ್ದಾರೆ ಎಂದು ದೂರಿದ್ರು. ಕೋಳಿ‌ ಸಮಾಜ ಎಸ್ಟಿ ‌ಸಮುದಾಯಕ್ಕೆ ಸೇರಿಸಲು ಭರವಸೆಯನ್ನ ನಾವು ನೀಡಿದ್ದೇವೆ. 2 ತಿಂಗಳಲ್ಲಿ ಬಿಜೆಪಿ ಸರ್ಕಾರ ರಚನೆಯಾದ ಬಳಿಕ ಸೇರ್ಪಡೆ ಕೆಲಸ ಮಾಡಲಾಗುತ್ತದೆ ಎಂದರು.

ನನ್ನನ್ನ ಸೋಲಿಸೋಕೆ ಬಿಜೆಪಿ ‌ಗಂಟು ತಿಂದಿದ್ದೇನಾ ಎಂದು ಖರ್ಗೆ ಹೇಳಿದ್ದಾರೆ. ಇದಕ್ಕೆ ಟಾಂಗ್ ನೀಡಿದ ರವಿಕುಮಾರ್, ಕಲಬುರಗಿ ಜನರ ಗಂಟನ್ನು ತಿಂದಿದ್ದಾರೆ. ಹೀಗಾಗಿ ಕಲಬುರಗಿ ಜನ ಖರ್ಗೆಗೆ ವಿಶ್ರಾಂತಿ ನೀಡಲು ತೀರ್ಮಾನಿಸಿದ್ದಾರೆ ಎಂದಿದ್ದಾರೆ. ಸೋಲಿನ ಭೀತಿಯಲ್ಲಿ ಖರ್ಗೆ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments