ಖರ್ಗೆ ಹಣ, ಹೆಂಡ ಹಂಚುತ್ತಿದ್ದಾರೆ ಎಂದೋರಾರು?

Webdunia
ಸೋಮವಾರ, 22 ಏಪ್ರಿಲ್ 2019 (15:26 IST)
ಇದುವರೆಗೆ ಮ್ಯಾಚ್ ಫಿಕ್ಸಿಂಗ್ ನಲ್ಲಿ ಗೆಲ್ಲುತ್ತಿದ್ದ ಮಲ್ಲಿಕಾರ್ಜುನ ಖರ್ಗೆ ಈ ಬಾರಿ ಹೀನಾಯವಾಗಿ ಸೋಲಲಿದ್ದಾರೆ. ಹೆಂಡ ಮತ್ತು ಹಣವನ್ನು ಹಂಚುವ ಕೆಲಸವನ್ನು ಖರ್ಗೆ ಹಾಗೂ ಅವರ ಮಗ ಪ್ರಿಯಾಂಕ ಖರ್ಗೆ ಮಾಡುತ್ತಿದ್ದಾರೆ. ಹೀಗಂತ ವಿಧಾನ ಪರಿಷತ್ ಸದಸ್ಯರೊಬ್ಬರು ಆರೋಪ ಮಾಡಿದ್ದಾರೆ.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಎಂಎಲ್ಸಿ ಎನ್.ರವಿಕುಮಾರ್ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ್ದು, ಕಲಬುರಗಿಯಲ್ಲಿ ಬಿಜೆಪಿ ಅಭ್ಯರ್ಥಿ 1 ಲಕ್ಷ ಮತ ಅಂತರಗಳಲ್ಲಿ ಗೆಲ್ಲಲಿದ್ದಾರೆ ಎಂದರು.

ಇನ್ನು ಕಾಂಗ್ರೆಸ್ ನವರು ಕನಿಷ್ಟ 100  ಕೋಟಿ ‌ರೂ. ಖರ್ಚು ಮಾಡುತ್ತಿದ್ದಾರೆ ಎಂದು ದೂರಿದ್ರು. ಕೋಳಿ‌ ಸಮಾಜ ಎಸ್ಟಿ ‌ಸಮುದಾಯಕ್ಕೆ ಸೇರಿಸಲು ಭರವಸೆಯನ್ನ ನಾವು ನೀಡಿದ್ದೇವೆ. 2 ತಿಂಗಳಲ್ಲಿ ಬಿಜೆಪಿ ಸರ್ಕಾರ ರಚನೆಯಾದ ಬಳಿಕ ಸೇರ್ಪಡೆ ಕೆಲಸ ಮಾಡಲಾಗುತ್ತದೆ ಎಂದರು.

ನನ್ನನ್ನ ಸೋಲಿಸೋಕೆ ಬಿಜೆಪಿ ‌ಗಂಟು ತಿಂದಿದ್ದೇನಾ ಎಂದು ಖರ್ಗೆ ಹೇಳಿದ್ದಾರೆ. ಇದಕ್ಕೆ ಟಾಂಗ್ ನೀಡಿದ ರವಿಕುಮಾರ್, ಕಲಬುರಗಿ ಜನರ ಗಂಟನ್ನು ತಿಂದಿದ್ದಾರೆ. ಹೀಗಾಗಿ ಕಲಬುರಗಿ ಜನ ಖರ್ಗೆಗೆ ವಿಶ್ರಾಂತಿ ನೀಡಲು ತೀರ್ಮಾನಿಸಿದ್ದಾರೆ ಎಂದಿದ್ದಾರೆ. ಸೋಲಿನ ಭೀತಿಯಲ್ಲಿ ಖರ್ಗೆ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments