Select Your Language

Notifications

webdunia
webdunia
webdunia
Friday, 11 April 2025
webdunia

ತಾಕತ್ತಿದ್ದರೆ ನನ್ನ ಮೇಲಿನ ಎಲ್ಲಾ ಕೇಸು ರೀ ಓಪನ್ ಮಾಡಿಸಿ -ಸಿಎಂಗೆ ಸವಾಲು ಹಾಕಿದ ಬಿಎಸ್ ವೈ

ಉಡುಪಿ
ಉಡುಪಿ , ಸೋಮವಾರ, 8 ಏಪ್ರಿಲ್ 2019 (09:13 IST)
ಉಡುಪಿ : ನಿಮಗೆ ತಾಕತ್ತಿದ್ದರೆ ನನ್ನ ಮೇಲಿನ ಎಲ್ಲಾ ಕೇಸು ರೀ ಓಪನ್ ಮಾಡಿಸಿ, ಮೇ 23ರ ಮೊದಲು ಕೇಸು ಓಪನ್ ಮಾಡಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಸಿ.ಎಂ ಎಚ್‍.ಡಿ ಕುಮಾರಸ್ವಾಮಿಗೆ ಸವಾಲು ಹಾಕಿದ್ದಾರೆ.


ಉಡುಪಿಯಲ್ಲಿ ಸುದ್ದಿಗೋಷ್ಠಿಯ ವೇಳೆ ಯಡಿಯೂರಪ್ಪ ಆಡಿಯೋ ತನಿಖೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ, ‘ಆತುರ ಏನಿಲ್ಲ. ಆಡಿಯೋ ಎಲ್ಲೂ ಹೋಗಲ್ಲ. ಈಗಲೇ ತನಿಖೆಗೆ ಕೊಟ್ಟರೆ ಇನ್ಯಾವುದೋ ರೀತಿಯಲ್ಲಿ ಅಪಪ್ರಚಾರ ಮಾಡುತ್ತಾರೆ. ಅಧಿಕಾರ ದುರುಪಯೋಗ ಮಾಡಿ ಯಡಿಯೂರಪ್ಪನವರಿಗೆ ತೊಂದರೆ ಕೊಡಲಾಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಾರೆ. ಚುನಾವಣೆ ಮುಗಿಯಲಿ ಆಮೇಲೆ ತನಿಖೆ ಮಾಡುವದಾಗಿ’ ಹೇಳಿದ್ದರು.


ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಅವರು, ‘ಮತದಾನದ ಬಳಿಕ ಯಡಿಯೂರಪ್ಪ ವಿರುದ್ಧ ಕೇಸ್ ರೀ ಒಪನ್ ಮಾಡಿಸುತ್ತೇವೆ ಎಂದು ಸಿಎಂ ಹೇಳಿದ್ದಾರೆ. ಆದರೆ ನಮ್ಮ ಬಗ್ಗೆ ಮಾತನಾಡುವ ಯೋಗ್ಯತೆ, ತಾಕತ್ತು ಸಿಎಂಗೆ ಇಲ್ಲ. ಎಲ್ಲವನ್ನೂ ಎದುರಿಸಿದ್ದೇನೆ, ಮುಂದೆಯೂ ಎದುರಿಸುತ್ತೇನೆ ತಾಕತ್ತು ಇದ್ದರೆ ನನ್ನ ಮೇಲಿನ ಎಲ್ಲಾ ಕೇಸು ರೀ ಓಪನ್ ಮಾಡಿಸಿ, ಮೇ 23ರ ಮೊದಲು ಕೇಸು ಓಪನ್ ಮಾಡಿಸಿ. ಏಕೆಂದರೆ ಮೇ 23 ನಂತರ ನೀವು ಮನೆಗೆ ಹೋಗುತ್ತೀರಿ, ಆಮೇಲೆ ಕೇಸು ನಾವು ಓಪನ್ ಮಾಡಿಸುತ್ತೇವೆ’ ಎಂದು ಸವಾಲು ಹಾಕಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯವರು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರನ್ನು ಕೊಂದವರು- ಬಿ.ವಿ.ನಾಯಕ್ ವಿವಾದಾತ್ಮಕ ಹೇಳಿಕೆ