Select Your Language

Notifications

webdunia
webdunia
webdunia
webdunia

ಲೋಕಸಭಾ ಸಮರ 2019: ಬೆಂಗಳೂರಿನಲ್ಲಿ ಮುನ್ನಡೆಯಲ್ಲಿರುವವರು ಯಾರು?

ಲೋಕಸಭಾ ಸಮರ 2019: ಬೆಂಗಳೂರಿನಲ್ಲಿ ಮುನ್ನಡೆಯಲ್ಲಿರುವವರು ಯಾರು?
ಬೆಂಗಳೂರು , ಗುರುವಾರ, 23 ಮೇ 2019 (09:53 IST)
ಬೆಂಗಳೂರು: ಲೋಕಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಬೆಂಗಳೂರಿನಲ್ಲಿ ಕಾಂಗ್ರೆಸ್  ಮತ್ತು ಬಿಜೆಪಿ ಜಿದ್ದಾಜಿದ್ದಿನ ಹೋರಾಟ ನಡೆಸುತ್ತಿದೆ.


ಬೆಂಗಳೂರು ಉತ್ತರದಲ್ಲಿ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯವಾದಾಗ ಬಿಜೆಪಿ ಅಭ್ಯರ್ಥಿ ಡಿವಿ ಸದಾನಂದ ಗೌಡ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಭೈರೇಗೌಡ ವಿರುದ್ಧ ಹಿನ್ನಡೆ ಅನುಭವಿಸಿದ್ದಾರೆ. ಆದರೆ ದ್ವಿತೀಯ ಹಂತ ಮತ ಎಣಿಕೆ ಆರಂಭದಲ್ಲಿ ಸಾವಿರ ಮತಗಳ ಅಂತರದಲ್ಲಿ ಮತ್ತೆ ಸದಾನಂದ ಗೌಡ ಮುನ್ನಡೆ ಸಾಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಮುನ್ನಡೆಯಲ್ಲಿದ್ದಾರೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ ಮುನ್ನಡೆಯಲ್ಲಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಮುನ್ನಡೆಯಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಮ್ಯಾಜಿಕ್ ನಂಬರ್ ದಾಟಿದ ಎನ್.ಡಿ.ಎ