Webdunia - Bharat's app for daily news and videos

Install App

ಜನರ ಸೇವೆಗಾಗಿಯೇ ನನ್ನ ಜೀವನ ಮುಡಿಪು-ಮೋದಿ

Webdunia
ಗುರುವಾರ, 23 ಮೇ 2019 (20:50 IST)
ನವದೆಹಲಿ: ಅಭೂತಪೂರ್ಣ ಯಶಸ್ಸಿನ ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿ ಇಡೀ ವಿಶ್ವಕ್ಕೆ ಪ್ರಜಾಪ್ರಭುತ್ವದ ಈ ಹಬ್ಬ ಮಾದರಿಯಾಗಿದೆ. ಇದನ್ನು ಯಶಸ್ವಿ ಮಾಡಿದ ಜನತಾ ಜನಾರ್ದನರಿಗೆ ನಮೋ ನಮಃ, ಇಲ್ಲಿ ಯಾರಾದರೂ ಗೆದ್ದಿದ್ದಾರೆ ಅಂದು ಜನತಾ ಜನಾರ್ದನರ ವಿಜಯ, ಇದು ಲೋಕತಂತ್ರದ ಜಯ ಎಂದು ಹೇಳಿದ್ದಾರೆ.





ಇಂದಿನ ಬಿಜೆಪಿ ಗೆಲುವು ಇತಿಹಾಸವನ್ನು ಬರೆದಿದೆ. ಸ್ವತಂತ್ರ ಭಾರತದ ಮೊದಲ ಬಾರಿಗೆ ರಣ ರಣ ಬಿಸಿಲನ್ನು ಲೆಕ್ಕಿಸದೇ ಮತದಾರರು ಬಂದು ಅತಿ ಹೆಚ್ಚು ಮತದಾನ ಮಾಡಿದ್ದಾರೆ. ಎಲ್ಲ ಅಡೆತಡೆಗಳನ್ನು ಮೀರಿ ಲೋಕತಂತ್ರದ ಹಬ್ಬದಲ್ಲಿ ಕೆಲಸ ಮಾಡಿದ ಚುನಾವಣಾ ಆಯೋಗ, ಭದ್ರತಾ ಸಿಬ್ಬಂದಿ ಸೇರಿದಂತೆ ಎಲ್ಲ ಅಧಿಕಾರಿಗಳಿಗೆ ಧನ್ಯವಾದ ಹೇಳಿದರು.


ನಾನು ಏನೇ ಮಾಡಿದರೂ ಅಭಿವೃದ್ಧಿಗಾಗಿ ಮಾಡುತ್ತೇನೆ. ಈ ರೀತಿಯ ಜನರು ನಮ್ಮ ಮೇಲೆ ವಿಶ್ವಾಸ ಇಟ್ಟಿರುವುದುನ್ನು ಎಂದಿಗೂ ಮರೆಯುವುದಿಲ್ಲ. ನಾನು ಯಾವುದನ್ನೂ ಮರೆಯುವುದಿಲ್ಲ. ಜನರ ಸೇವೆಗಾಗಿಯೇ ನನ್ನ ಜೀವನ ಮುಡಿಪು ಎಂದು ಮೋದಿ ಹೇಳಿದ್ದಾರೆ.


ಚುನಾವಣೆಯಲ್ಲಿ ಯಾರು ಏನು ಹೇಳಿದರು ಎನ್ನುವುದು ನಮಗೆ ಬೇಡ. ಎಲ್ಲವೂ ಮುಗಿದು ಹೋಗಿದೆ. ಎಲ್ಲರನ್ನು ಜೊತೆಯಾಗಿ ಕರೆದುಕೊಂಡು ಹೋಗುವುದು ನಮ್ಮ ಕರ್ತವ್ಯ. ದೇಶದ ಅಭಿವೃದ್ಧಿಗಾಗಿ ನಮ್ಮ ಜೊತೆ ಹೆಜ್ಜೆ ಹಾಕುವವರು ಪ್ರಾಮಾಣಿಕವಾಗಿರಬೇಕು ಎಂದು ಮೋದಿ ಹೇಳಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಕೊನೆಗೂ ಪತ್ತೆಯಾಯ್ತು ಮೂಳೆ: ಹೇಗಿತ್ತು ಶವದ ಸ್ಥಿತಿ ಇಲ್ಲಿದೆ ವಿವರ

ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ಸಾಕ್ಷಿ ಇದೆ: ಸಿದ್ದರಾಮಯ್ಯ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಗಾರ್ಡನ್ ಸಿಟಿಯನ್ನ ಜಿಹಾದಿ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಆರ್ ಅಶೋಕ್

Gold Price: ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ಮುಂದಿನ ಸುದ್ದಿ
Show comments