Webdunia - Bharat's app for daily news and videos

Install App

ಹೆಗಡೆ ಪಂಚಾಯಿತಿ ಮೆಂಬರ್ ಆಗೋದಕ್ಕೂ ನಾಲಾಯಕ್ ಅಂದ ಸಿದ್ದು

Webdunia
ಮಂಗಳವಾರ, 16 ಏಪ್ರಿಲ್ 2019 (16:03 IST)
ವೇದಿಕೆ ಮೇಲೆ ಭಾಷಣ ಮಾಡುವಾಗೆಲ್ಲಾ ಮಿಸ್ಟರ್ ಯಡಿಯೂರಪ್ಪ.... ಮಿಸ್ಟರ್ ಯಡಿಯೂರಪ್ಪ ಅಂತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಒಂದೆಡೆ ಕೋಮುವಾದವನ್ನ ಪ್ರಮೋಟ್ ಮಾಡ್ತಿದ್ದೀರಾ, ಮತ್ತೊಂದೆಡೆ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ಕೊಡ್ತಿದ್ದೀರಾ, ಭ್ರಷ್ಟಾಚಾರದಲ್ಲಿ ಪಾಲುದಾರರಾಗಿರೋ ಮಿಸ್ಟರ್ ನರೇಂದ್ರ ಮೋದಿಯವ್ರೆ ನೀವು ಚೌಕಿದಾರ ಹೇಗಾಗ್ತೀರಾ ಎಂದು ಪ್ರಧಾನಿ ಮೋದಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಪರ ಮತಯಾಚನೆ ವೇಳೆ ಮಾತನಾಡಿದ ಸಿದ್ದರಾಮಯ್ಯ, ನನ್ನ ಪ್ರಕಾರ ಆ ಅನಂತ್ ಕುಮಾರ್ ಹೆಗ್ಡೆ ಗ್ರಾಮ ಪಂಚಾಯಿತಿ ಮೆಂಬರ್ ಆಗೋದಕ್ಕೂ ನಾಲಾಯಕ್ ಎಂದರು. ಮೋದಿ ಹೇಳಿದ ಮೇಲೆ ಆ ಯಡಿಯೂರಪ್ಪ, ಶೋಭಾ ಎಲ್ಲರೂ ನಾನು ಚೌಕಿದಾರ್ ಅಂತಿದ್ದಾರೆ.

ಜನಾರ್ಧನ ರೆಡ್ಡಿ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಕೃಷ್ಣಯ್ಯ ಶೆಟ್ಟಿ ಎಲ್ಲರೂ ಜೈಲಿಗೆ ಹೋಗಿ ಬಂದೋರು. ಜೈಲಿಗೆ ಹೋಗಿ ಬಂದೋರೆಲ್ಲಾ ಚೌಕಿದಾರರಾದ್ರೆ ನಾವೆಲ್ಲಾ ಏನು ಎಂದು ಪ್ರಶ್ನಿಸಿದ್ದಾರೆ. ಈ ಗಿರಾಕಿ ಜೈಲಿಗೆ ಹೋಗಿ ಬಂದವ. ಮರ್ಡರ್ ಕೇಸಲ್ಲಿ ಸಿಕ್ಕಿಬಿದ್ದು ಮೂರು ವರ್ಷ ಜೈಲಿನಲ್ಲಿದ್ದ ಎಂದು ಅಮಿತ್ ಶಾ ವಿರುದ್ಧವೂ ವ್ಯಂಗ್ಯವಾಡಿದ್ರು. 



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments