ಕಾಂಗ್ರೆಸ್ ಪ್ರಚಾರ ವೇಳೆ ಮೋದಿ ಪರ ಘೋಷಣೆ

Webdunia
ಗುರುವಾರ, 11 ಏಪ್ರಿಲ್ 2019 (18:55 IST)
ಕಾಂಗ್ರೆಸ್ ಪ್ರಚಾರ ವೇಳೆ ಕೆಲವರು ಮೋದಿ ಪರ ಘೋಷಣೆ ಕೂಗಿದ್ದಕ್ಕೆ ಹಾಲಿ ಸಂಸದ ಬೇಸರ ವ್ಯಕ್ತಪಡಿಸಿದ್ದಾರೆ.
ಚಾಮರಾಜನಗರದ ಉಮ್ಮತ್ತೂರು ಗ್ರಾಮದಲ್ಲಿ ಬೇರೆ ಕಡೆಯಿಂದ ಬಂದ ಬಿಜೆಪಿಯ ಯುವಕರು  ಕಿರಿ ಕಿರಿ ಮಾಡಿದ್ರು.

ನಾವು ಮತಯಾಚನೆ ಮಾಡೋದಕ್ಕೆ ಅಡ್ಡಿಪಡಿಸಿ, ಮೋದಿ ಮೋದಿ ಎಂದು ಘೋಷಣೆ ಕೂಗೋಕೆ ಪ್ರಾರಂಭಿಸಿದ್ರು.
ಇದು ತಪ್ಪು ಬೆಳವಣಿಗೆ, ಯಾಕೆಂದ್ರೆ ಮತಯಾಚನೆ ಮಾಡೋಕೆ ಅವಕಾಶ ಮಾಡಿಕೊಡಬೇಕು. ಹೀಗಂತ ಕಾಂಗ್ರೆಸ್ ಅಭ್ಯರ್ಥಿ ಆರ್. ಧೃವನಾರಾಯಣ್ ಹೇಳಿದ್ದಾರೆ.

ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಧೃವನಾರಾಯಣ್, ನಂಜನಗೂಡಿನ ಬೈ ಎಲೆಕ್ಷನ್ ನಲ್ಲಿ ಪ್ರಸಾದ್ ಸೋಲಿಗೆ ನಾನು ಕಾರಣ ಅಲ್ಲ. ಕೇಶವ ಮೂರ್ತಿ ಕ್ಯಾಂಡಿಡೇಟ್ ಬಗ್ಗೆ ಸಿದ್ದರಾಮಯ್ಯ ಮೊದಲೇ ಸರ್ವೆ ಮಾಡಿಸಿದ್ರು. ಆ ಚುನಾವಣೆಯ ಜವಾಬ್ದಾರಿಯನ್ನ ನನಗ ವಹಿಸಿದ್ರು ಅಷ್ಟೇ.

ನಾನು ಶ್ರೀನಿವಾಸ ಪ್ರಸಾದ್ ವಿರುದ್ಧ ಯಾವ ಪಿತೂರಿಯನ್ನೂ ಮಾಡಲಿಲ್ಲ. ಪಕ್ಷದ ಗೆಲುವಿಗಾಗಿ ಶ್ರಮಿಸಿದ್ದೇನೆ.
ಕೆಲವು ಕಡೆ ಬಿಜೆಪಿಯವರು ಬೇಕು ಬೇಕು ಅಂತಾನೇ ಕಿರಿ ಕಿರಿ ಮಾಡ್ತಾರೆ ಅಂತ ಸಂಸದ ಆರ್.ದೃವನಾರಾಯಣ್ ಬೇಸರ ವ್ಯಕ್ತಪಡಿಸಿದ್ರು.

ಮತದಾನದ ದಿನಾಂಕ ಸಮೀಪಿಸುತ್ತಿದ್ದಂತೆ ದೃವ, ಬಿರುಸಿನ ಪ್ರಚಾರ ನಡೆಸಿದ್ರು. ಗಡಿ ಜಿಲ್ಲೆಯ ಚಾಮರಾಜನಗರ, ಕೊಳ್ಳೇಗಾಲ, ಗುಂಡ್ಲುಪೇಟೆ, ಯಳಂದೂರು ವ್ಯಾಪ್ತಿಯಲ್ಲಿ ಪ್ರಚಾರ ನಡೆಸಿದ್ರು. ಜನರ ಸೇವೆ ಮಾಡಲು ಮತ್ತೊಮ್ಮೆ ಅವಕಾಶ ನೀಡಿ ಆಶೀರ್ವಾದ ಮಾಡುವಂತೆ ಮನವಿ ಮಾಡಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments