Webdunia - Bharat's app for daily news and videos

Install App

ನೂರು ಕಾಂಗ್ರೆಸ್ ಬಾವುಟ ಹಿಡಿದು ಸುಮಲತಾ ಪರ ಪ್ರಚಾರ ಮಾಡ್ತೇವಿ…

Webdunia
ಗುರುವಾರ, 4 ಏಪ್ರಿಲ್ 2019 (17:05 IST)
ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ನಾಯಕರ ವಿರುದ್ಧ ಭುಗಿಲೆದ್ದ ಆಕ್ರೋಶ ವ್ಯಾಪಕ ಸ್ವರೂಪ ಪಡೆದುಕೊಳ್ಳುತ್ತಿದೆ.
ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ವಿರುದ್ಧ ಘೋಷಣೆ ಕೂಗಲಾಗುತ್ತಿದೆ.  
ಇಂಡುವಾಳು ಸಚ್ಚಿದಾನಂದ ಮನೆಯಲ್ಲಿ ನಡೆದ ಸಭೆ ಬಳಿಕ, ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ  ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೊಮ್ಮಗನನ್ನು ಬೆಳೆಸಲು ಮಂಡ್ಯವನ್ನ ಜೆಡಿಎಸ್ ಆಯ್ಕೆ ಮಾಡಿಕೊಂಡಿದೆ. ಮಂಡ್ಯದಲ್ಲಿ ಕಾಂಗ್ರೆಸ್‌ಗೆ ಅಸ್ತಿತ್ವದ ಪ್ರಶ್ನೆ ಎದುರಾಗಿದೆ. ನಮ್ಮ ಅಸ್ತಿತ್ವ ಉಳಿಸಿಕೊಳ್ಳಲು, ಅಂಬಿ ಅಣ್ಣನ ಋಣ ತೀರಿಸಲು ನಾವೂ ಸುಮಲತಾ ಅವ್ರನ್ನ ಬೆಂಬಲಿಸುತ್ತೇವೆ. ನಮಗೆ ಕಾಂಗ್ರೆಸ್ ಬಾವುಟ ಹಿಡಿದು ಸುಮಲತಾ ಪರ ಪ್ರಚಾರ ಮಾಡ್ಬೇಡಿ ಎನ್ನುವ ಹಕ್ಕು ಯಾರಿಗೂ ಇಲ್ಲ. ಒಂದಲ್ಲ ನೂರು ಕಾಂಗ್ರೆಸ್ ಬಾವುಟ ಹಿಡಿದು ಪ್ರಚಾರ ಮಾಡ್ತೀವಿ ಎಂದಿದ್ದಾರೆ.

ಗಂಗಾಧರ್ ಅವ್ರನ್ನ ಜಿಲ್ಲಾಧ್ಯಕ್ಷರನ್ನಾಗಿ ಮಾಡಿದ್ದು ಅಂಬರೀಶ್. ಗಂಗಾಧರ್ ಅವರು ಅಂಬರೀಶ್ ಅವರ ಋಣ ತೀರಿಸಲು ನಮ್ಮೆಲ್ಲರಿಗಿಂತ ಮೊದಲು ಸುಮಲತಾ ಪರ ನಿಲ್ಲಬೇಕಿತ್ತು. ಹಾಲಿ ಎಂಪಿಗಳಿರುವ ಕ್ಷೇತ್ರಗಳನ್ನು ಆಯಾ ಪಕ್ಷಗಳಿಗೆ ಬಿಡುವುದಾಗಿ ಹೇಳಿ ತುಮಕೂರನ್ನ ಜೆಡಿಎಸ್ ಕಿತ್ತುಕೊಂಡಿದೆ.

ಮಂಡ್ಯದಲ್ಲಿ ಮೊಮ್ಮಗನನ್ನ ಬೆಳೆಸಲು ಕಾಂಗ್ರೆಸ್ಸನ್ನ ನಿರ್ನಾಮ ಮಾಡಲು ಹೊರಟಿದೆ ಎಂದು ಕೈ ಕಾರ್ಯಕರ್ತರು ದೂರಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments