Publish Date: Fri, 26 Apr 2019 (08:38 IST)
Updated Date: Fri, 26 Apr 2019 (08:40 IST)
ನವದೆಹಲಿ: ಲೋಕಸಭೆ ಚುನಾವಣೆ 2019 ಕ್ಕೆ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸಲು ಇಂದು ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ನಿನ್ನೆ ಭರ್ಜರಿ ರೋಡ್ ಶೋ ನಡೆಸಿದ್ದ ಪ್ರಧಾನಿ ಮೋದಿಗೆ ಬಿಜೆಪಿಯ ಘಟಾನುಘಟಿ ನಾಯಕರು ಜತೆಯಾಗಿದ್ದರು. ಇಂದೂ ಕೂಡಾ ಮೋದಿಗೆ ಗೃಹ ಸಚಿವ ರಾಜನಾಥ್ ಸಿಂಗ್, ಅಮಿತ್ ಶಾ ಮುಂತಾದ ಘಟಾನುಘಟಿ ನಾಯಕರು ಸಾಥ್ ನೀಡಲಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮೊದಲು ಕಾಳಭೈರವೇಶ್ವರನಿಗೆ ಪೂಜೆ ಸಲ್ಲಿಸಲಿರುವ ಪ್ರಧಾನಿ ಮೋದಿ ಎರಡನೇ ಬಾರಿ ಆಯ್ಕೆ ಬಯಸಿ ಬೇಡಿಕೊಳ್ಳಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ