Webdunia - Bharat's app for daily news and videos

Install App

ಕೈ ನಾಯಕ ರಾಜಣ್ಣ ಪರೋಕ್ಷವಾಗಿ ನಮಗೆ ಬೆಂಬಲ ನೀಡುತ್ತಾರೆ - ಬಿಜೆಪಿ ನಾಯಕರಿಂದ ಅಚ್ಚರಿಯ ಹೇಳಿಕೆ

Webdunia
ಸೋಮವಾರ, 15 ಏಪ್ರಿಲ್ 2019 (08:48 IST)
ತುಮಕೂರು : ಕಾಂಗ್ರೆಸ್ ಮಾಜಿ ಶಾಸಕ ಕೆಎನ್ ರಾಜಣ್ಣ ಅವರು ನೇರವಾಗಿ ಅಲ್ಲದಿದ್ದರೂ ಪರೋಕ್ಷವಾಗಿ ನಮಗೆ ಬೆಂಬಲ ನೀಡುತ್ತಾರೆ ಎಂದು ಬಿಜೆಪಿ ನಾಯಕ ವಿ.ಸೋಮಣ್ಣ ಹಾಗೂ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ತುಮಕೂರು ಕ್ಷೇತ್ರದ ಮಧುಗಿರಿಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ್ ಪರ ಪ್ರಚಾರ ನಡೆಸಿ ಮಾತನಾಡಿದ ವಿ.ಸೋಮಣ್ಣ ಹಾಗೂ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು, ರಾಜಣ್ಣ ಅವರ ಅಭಿವೃದ್ಧಿ ಕೆಲಸ ನಮಗೆ ಅನುಕೂಲವಾಗಲಿದೆ. ಮೈತ್ರಿ ಬಗ್ಗೆ ಬೇಸರ ಇರುವುದಾಗಿ ರಾಜಣ್ಣ ಅವರು ಮಾಧ್ಯಮಗಳಲ್ಲಿ ಹೇಳಿದ್ದಾರೆ. ಹಾಗಾಗಿ ಆಂತರಿಕವಾಗಿ ನಮಗೆ ಬೆಂಬಲ ನೀಡುತ್ತಾರೆ. ಅವರ ನಾಮಪತ್ರವನ್ನು ಒತ್ತಾಯದಿಂದ ಹಿಂಪಡೆಯುವಂತೆ ಮಾಡಿದ್ದಾರೆ. ಅವರಿಗೆ ಮೈತ್ರಿಯಲ್ಲಿ ಅಸಮಾಧಾನ ಇದೆ. ಈ ಅಸಮಾಧಾನ ನಮಗೆ ಅನುಕೂಲ ಆಗಲಿದೆ  ಎಂದು ಕೆಎನ್ ರಾಜಣ್ಣ ಅವರನ್ನು ಹಾಡಿ ಹೊಗಳಿದ್ದಾರೆ.

 

ಚುನಾವಣೆಗೆ ಕೆಲ ದಿನಗಳು ಇರುವ ಸಂದರ್ಭದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಮಾಜಿ ಶಾಸಕ ರಾಜಣ್ಣ ಅವರನ್ನು ಹಾಡಿ ಹೊಗಳುವ ರೀತಿ ಅಚ್ಚರಿ ಮೂಡಿಸಿದ್ದಲ್ಲದೇ ತುಮಕೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿ ಹೆಚ್. ಡಿ.ದೇವೆಗೌಡರಿಗೆ ಕೈ ಕೊಡುತ್ತಾರಾ ರಾಜಣ್ಣ ಎಂಬ ಅನುಮಾನ ಇದೀಗ ಶುರುವಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments