Webdunia - Bharat's app for daily news and videos

Install App

ಖರ್ಗೆ ಅವರೇ ಸಿಎಂ ಆಗಬೇಕಿತ್ತು ಎಂಬ ಸಿಎಂ ಹೇಳಿಕೆಯಲ್ಲಿ ಕುತಂತ್ರವಿದೆ ಎಂದ ಬಿಜೆಪಿ ಶಾಸಕ

Webdunia
ಬುಧವಾರ, 15 ಮೇ 2019 (10:58 IST)
ಕಲಬುರಗಿ : ಮೈತ್ರಿ ಸರ್ಕಾರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರೇ ಸಿಎಂ ಆಗಬೇಕಿತ್ತು ಎಂದ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಯಲ್ಲಿ ಕುತಂತ್ರವಿದೆ ಎಂದು  ಶಾಸಕ ಬಸವನಗೌಡ ಯತ್ನಾಳ್ ಹೇಳಿದ್ದಾರೆ.




ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖರ್ಗೆಯವರನ್ನ ಸಿಎಂ ಮಾಡಲು ಕಾಂಗ್ರೆಸ್ ನಲ್ಲೇ ಒಲವಿಲ್ಲ. ಕಾಂಗ್ರೆಸ್, ಖರ್ಗೆ ಅವರ ಅನುಭವದ ಪ್ರಯೋಜನ ಪಡೀತಿಲ್ಲ. ಅಂತಹದರಲ್ಲಿ ಖರ್ಗೆ ಬಗ್ಗೆ ಕುಮಾರಸ್ವಾಮಿ ಈ ಹೇಳಿಕೆ ನಾಟಕೀಯವಾದದ್ದು ಎಂದು ಹೇಳಿದ್ದಾರೆ. 


ಈ ರೀತಿ ಹೇಳಿಕೆ ನೀಡಿ ಸಿದ್ದರಾಮಯ್ಯ ಮತ್ತು ಖರ್ಗೆ ಮಧ್ಯೆ ಜಗಳ ಹಚ್ಚುವ ಕೆಲಸ ಸಿಎಂ ಕುಮಾರಸ್ವಾಮಿ ಮಾಡಿದ್ದಾರೆ. ಈ ಮೂಲಕ ತಾವು ಅಧಿಕಾರ ನಡೆಸಬೇಕು ಅನ್ನೋದು ಹೆಚ್.ಡಿ.ಕೆ. ಹುನ್ನಾರ ಎಂದು ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments