Select Your Language

Notifications

webdunia
webdunia
webdunia
webdunia

ರಾಜಧಾನಿಯ ಮೂರೂ ಅಭ್ಯರ್ಥಿಗಳು ಗೆಲ್ತಾರೆ ಎಂದ ಕೆಪಿಸಿಸಿ ಅಧ್ಯಕ್ಷ

ರಾಜಧಾನಿಯ ಮೂರೂ ಅಭ್ಯರ್ಥಿಗಳು ಗೆಲ್ತಾರೆ ಎಂದ ಕೆಪಿಸಿಸಿ ಅಧ್ಯಕ್ಷ
ಬೆಂಗಳೂರು , ಶುಕ್ರವಾರ, 5 ಏಪ್ರಿಲ್ 2019 (18:37 IST)
ನಾವು ಎಲ್ಲ ಸಮುದಾಯ- ಧರ್ಮ ವನ್ನ ಸಮಾನವಾಗಿ ನೋಡುತ್ತೇವೆ. ಹೀಗಾಗಿಯೇ ಬೆಂಗಳೂರಿನ ಮೂರು ಕ್ಷೇತ್ರದಲ್ಲಿ ಬೇರೆ ಬೇರೆ ಸಮುದಾಯದವರು ಇದ್ದಾರೆ ಅಂತ ಕೆಪಿಸಿಸಿ ಅಧ್ಯಕ್ಷ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದು, ಬೆಂಗಳೂರು ಉತ್ತರದಲ್ಲಿ ಕೃಷ್ಣಭೈರೇಗೌಡ ಒಕ್ಕಲಿಗ ಸಮುದಾಯದವರು. ಬೆಂಗಳೂರು ದಕ್ಷಿಣದಲ್ಲಿ ಬಿ.ಕೆ.ಹರಿಪ್ರಸಾದ್ ಹಿಂದುಳಿದ ಜನಾಂಗಕ್ಕೆ ಸೇರಿದವರು. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ರಿಜ್ವಾನ್ ಅರ್ಷದ್ ಅಲ್ಪಸಂಖ್ಯಾತ ಸಮುದಾಯವರಾಗಿದ್ದಾರೆ. ಬೆಂಗಳೂರಿನ ಮೂವರು ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ ಎಂದರು.

ಸಿದ್ದರಾಮಯ್ಯ ಅವಧಿಯಲ್ಲಿ ಬೆಂಗಳೂರಿಗೆ ಸಾಕಷ್ಟು ಕೊಡುಗೆ ನೀಡಲಾಗಿದೆ. ಮೈತ್ರಿ ಸರ್ಕಾರದಲ್ಲೂ ಬೆಂಗಳೂರಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ. ಬೆಂಗಳೂರಿನ ಜನ ಈ ಬಾರಿ ನಮ್ಮ ಕೈ ಬಿಡುವುದಿಲ್ಲ. ಮೂರಕ್ಕೆ ಮೂರು ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ ಎಂದರು.



Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಅಭ್ಯರ್ಥಿ ಸೂರ್ಯ ಅಲ್ಲ ಅಮವಾಸ್ಯೆ?