Webdunia - Bharat's app for daily news and videos

Install App

ಮೋದಿ ಜಾತಿ ಬಗ್ಗೆ ಮಾತನಾಡೋದಕ್ಕೆ ನಾಚಿಕೆ ಆಗ್ಬೇಕು ಎಂದ ಸಚಿವ

Webdunia
ಶುಕ್ರವಾರ, 19 ಏಪ್ರಿಲ್ 2019 (16:48 IST)
ಮೋದಿ ರಾಜ್ಯಕ್ಕೆ ಬಂದಾಗ ವೀರಶೈವ ಜಾತಿ ವಿಚಾರದ ಬಗ್ಗೆ ಮಾತನಾಡುತ್ತಾರೆ. ಅಷ್ಟು ದೊಡ್ಡ ಸ್ಥಾನದಲ್ಲಿ ಇದ್ದುಕೊಂಡು ತಾನೂ ಏನು ಸಾಧನೆ ಮಾಡಿದ್ದೇನೆ ಎಂದು ಪಟ್ಟಿಕೊಡುವುದಕ್ಕೆ ಆಗದೇ ಸಣ್ಣ ಸಣ್ಣ ವಿಚಾರಗಳ ಬಗ್ಗೆ ಮಾತನಾಡುತ್ತಾರೆ. ಹೀಗಂತ ಸಚಿವರೊಬ್ಬರು ಕಿಡಿಕಾರಿದ್ದಾರೆ.

ಶಿವಮೊಗ್ಗದಲ್ಲಿ ಬೃಹತ್ ನೀರಾವರಿ‌ ಸಚಿವ ಡಿ.ಕೆ.ಶಿವಕುಮಾರ್ ಪತ್ರಿಕಾಗೋಷ್ಠಿ ನಡೆಸಿದ್ದು, ಧರ್ಮದ ಹಾಗೂ ರೈತರ ವಿಚಾರವನ್ನ ಮಾತನಾಡುತ್ತಾರೆ ಮೋದಿ ಎಂದು ಟೀಕೆ ಮಾಡಿದರು.

ಕಾಂಗ್ರೆಸ್ ಪಕ್ಷ ಯಾವ ಧರ್ಮವನ್ನ ಒಡೆಯುವ ವಿಚಾರಕ್ಕೆ ಕೈಹಾಕಿಲ್ಲ. ನಿಮ್ಮ ಪಕ್ಷದ ನಾಯಕರು ಅಖಿಲ ವೀರಶೈವ ಮಹಾಸಭಾದ ಮುಖಂಡರು, ಪ್ರಧಾನ ಮಂತ್ರಿಯಾಗಿದ್ದ ಮನಮೋಹನ್ ಸಿಂಗ್ ಹಾಗೂ ಸೋನಿಯಾ ಗಾಂಧಿಯವರನ್ನ ಭೇಟಿ ಮಾಡಿದ್ದರು. ವೀರಶೈವ ಮುಖಂಡರಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಪ್ರಭಾಕರ್ ಕೋರೆ ಹಾಗೂ ಜೆಡಿಎಸ್ ನ ವೀರಶೈವ ಮುಖಂಡರು ವೀರಶೈವ ಸಮಾಜವನ್ನ ಬೇರೆ ವಿಂಗ್ ಮಾಡಿ ಎಂದು ಮನವಿ ಮಾಡಿದ್ದರು.
ನಾವು ಅದನ್ನ ಮುಂದುವರೆಸಿದ್ದೇವೆ ವಿನಃ ನಾವು ಕೈಹಾಕಿಲ್ಲ ಎಂದರು.

ಕಾಂಗ್ರೆಸ್ ಪಕ್ಷದ ಮೇಲೆ  ಪ್ರಧಾನ ಮಂತ್ರಿ ಗೊಬೆ ಕೂರಿಸುತ್ತಿದ್ದಾರೆ. ಪ್ರಧಾನ ಮಂತ್ರಿಯಾಗಿದ್ದವರು ಈ ವಿಷಯ ವನ್ನ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ರಾಜ್ಯದಲ್ಲಿ ಸೋಲಿನ ಭೀತಿ ಕಾಡುತ್ತಿದೆ ಎಂದರು.

ಎಲ್ಲಾ ಪ್ರಧಾನ ಮಂತ್ರಿಗಳ ಕಾಲದಲ್ಲೂ ಯುದ್ಧಗಳು ನಡೆದಿವೆ. ರಾಜಕಾರಣಕ್ಕೆ ಯುದ್ಧಗಳನ್ನ ಹಾಗೂ ಯೋಧರನ್ನ ಬಳಸಿಕೊಳ್ಳುತ್ತಿರುವುದಕ್ಕೆ ನಾಚಿಕೆಯಾಗಬೇಕು ಎಂದು ದೂರಿದ್ರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments