ಮೋದಿ ಜಾತಿ ಬಗ್ಗೆ ಮಾತನಾಡೋದಕ್ಕೆ ನಾಚಿಕೆ ಆಗ್ಬೇಕು ಎಂದ ಸಚಿವ

Webdunia
ಶುಕ್ರವಾರ, 19 ಏಪ್ರಿಲ್ 2019 (16:48 IST)
ಮೋದಿ ರಾಜ್ಯಕ್ಕೆ ಬಂದಾಗ ವೀರಶೈವ ಜಾತಿ ವಿಚಾರದ ಬಗ್ಗೆ ಮಾತನಾಡುತ್ತಾರೆ. ಅಷ್ಟು ದೊಡ್ಡ ಸ್ಥಾನದಲ್ಲಿ ಇದ್ದುಕೊಂಡು ತಾನೂ ಏನು ಸಾಧನೆ ಮಾಡಿದ್ದೇನೆ ಎಂದು ಪಟ್ಟಿಕೊಡುವುದಕ್ಕೆ ಆಗದೇ ಸಣ್ಣ ಸಣ್ಣ ವಿಚಾರಗಳ ಬಗ್ಗೆ ಮಾತನಾಡುತ್ತಾರೆ. ಹೀಗಂತ ಸಚಿವರೊಬ್ಬರು ಕಿಡಿಕಾರಿದ್ದಾರೆ.

ಶಿವಮೊಗ್ಗದಲ್ಲಿ ಬೃಹತ್ ನೀರಾವರಿ‌ ಸಚಿವ ಡಿ.ಕೆ.ಶಿವಕುಮಾರ್ ಪತ್ರಿಕಾಗೋಷ್ಠಿ ನಡೆಸಿದ್ದು, ಧರ್ಮದ ಹಾಗೂ ರೈತರ ವಿಚಾರವನ್ನ ಮಾತನಾಡುತ್ತಾರೆ ಮೋದಿ ಎಂದು ಟೀಕೆ ಮಾಡಿದರು.

ಕಾಂಗ್ರೆಸ್ ಪಕ್ಷ ಯಾವ ಧರ್ಮವನ್ನ ಒಡೆಯುವ ವಿಚಾರಕ್ಕೆ ಕೈಹಾಕಿಲ್ಲ. ನಿಮ್ಮ ಪಕ್ಷದ ನಾಯಕರು ಅಖಿಲ ವೀರಶೈವ ಮಹಾಸಭಾದ ಮುಖಂಡರು, ಪ್ರಧಾನ ಮಂತ್ರಿಯಾಗಿದ್ದ ಮನಮೋಹನ್ ಸಿಂಗ್ ಹಾಗೂ ಸೋನಿಯಾ ಗಾಂಧಿಯವರನ್ನ ಭೇಟಿ ಮಾಡಿದ್ದರು. ವೀರಶೈವ ಮುಖಂಡರಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಪ್ರಭಾಕರ್ ಕೋರೆ ಹಾಗೂ ಜೆಡಿಎಸ್ ನ ವೀರಶೈವ ಮುಖಂಡರು ವೀರಶೈವ ಸಮಾಜವನ್ನ ಬೇರೆ ವಿಂಗ್ ಮಾಡಿ ಎಂದು ಮನವಿ ಮಾಡಿದ್ದರು.
ನಾವು ಅದನ್ನ ಮುಂದುವರೆಸಿದ್ದೇವೆ ವಿನಃ ನಾವು ಕೈಹಾಕಿಲ್ಲ ಎಂದರು.

ಕಾಂಗ್ರೆಸ್ ಪಕ್ಷದ ಮೇಲೆ  ಪ್ರಧಾನ ಮಂತ್ರಿ ಗೊಬೆ ಕೂರಿಸುತ್ತಿದ್ದಾರೆ. ಪ್ರಧಾನ ಮಂತ್ರಿಯಾಗಿದ್ದವರು ಈ ವಿಷಯ ವನ್ನ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ರಾಜ್ಯದಲ್ಲಿ ಸೋಲಿನ ಭೀತಿ ಕಾಡುತ್ತಿದೆ ಎಂದರು.

ಎಲ್ಲಾ ಪ್ರಧಾನ ಮಂತ್ರಿಗಳ ಕಾಲದಲ್ಲೂ ಯುದ್ಧಗಳು ನಡೆದಿವೆ. ರಾಜಕಾರಣಕ್ಕೆ ಯುದ್ಧಗಳನ್ನ ಹಾಗೂ ಯೋಧರನ್ನ ಬಳಸಿಕೊಳ್ಳುತ್ತಿರುವುದಕ್ಕೆ ನಾಚಿಕೆಯಾಗಬೇಕು ಎಂದು ದೂರಿದ್ರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಮುಂದಿನ ಸುದ್ದಿ
Show comments