Publish Date: Thu, 18 Apr 2019 (16:10 IST)
Updated Date: Thu, 18 Apr 2019 (16:11 IST)
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೈ ಪಾಳೆಯದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಟಾಂಗ್ ಕೊಡುತ್ತಿರುವ ಬಿಜೆಪಿ ಅಭ್ಯರ್ಥಿ ಪ್ರಚಾರ ತೀವ್ರಗೊಳಿಸಿದ್ದಾರೆ.
ಕಲಬುರಗಿಯ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಅವರಿಂದ ಭರ್ಜರಿ ಮತ ಬೇಟೆ ಮುಂದುವರಿದಿದೆ.
ಬೆಳ್ಳಂಬೆಳಿಗ್ಗೆ ಬಿಜೆಪಿ ಅಭ್ಯರ್ಥಿಯಿಂದ ಸೇಡಂ ಪಟ್ಟಣದಲ್ಲಿ ಮತ ಬೇಟೆ ಶುರುವಾಗಿದೆ. ಸೇಡಂ ಪಟ್ಟಣದ ಪ್ರಮುಖ ರಸ್ತೆ ಗಳಲ್ಲಿ ರೋಡ್ ಶೋ ನಡೆಸಲಾಗಿದೆ. ಜಾಧವ್ ಗೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಸಾಥ್ ನೀಡಿದ್ದಾರೆ.