ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಉಪ ತಹಶೀಲ್ದಾರ ಅಮಾನತ್

Webdunia
ಶುಕ್ರವಾರ, 12 ಏಪ್ರಿಲ್ 2019 (21:10 IST)
ಲೋಕಸಭಾ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಮಾಶಾಸನ ಮಂಜೂರು ಮಾಡಿ, ಸರ್ಕಾರಿ ಸೇವೆಯಲ್ಲಿ ನಿರ್ಲಕ್ಷತನ ಮತ್ತು ಕರ್ತವ್ಯ ಲೋಪವೆಸಗಿರುವ ಉಪ ತಹಶೀಲ್ದಾರರನ್ನು ಅಮಾನತ್ ಮಾಡಲಾಗಿದೆ.

ಹುಮನಾಬಾದ ತಾಲೂಕಿನ ಹಳ್ಳಿಖೇಡ (ಬಿ) ನಾಡ ಕಚೇರಿಯ ಉಪ ತಹಶೀಲ್ದಾರ ಪ್ರೇಮದಾಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತುಗೊಳಿಸಿ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋದ ಯಾಧವ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 10(1) (ಡಿ) ರಡಿಯಲ್ಲಿ ಇವರನ್ನು ಇಲಾಖಾ ವಿಚಾರಣೆ ಬಾಕಿ ಇಟ್ಟು ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ.  ಜೀವನಾಂಶ ಭತ್ಯೆ ಪಡೆಯಲು ಅರ್ಹರಿರುತ್ತಾರೆ. ಸಕ್ಷಮ ಪ್ರಾಧಿಕಾರದ ಪರವಾನಿಗೆ ಪಡೆಯದೇ ಕೇಂದ್ರ ಸ್ಥಾನ ಬಿಡತಕ್ಕದ್ದಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. 

ಬೆಂಗಳೂರಿನ ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದಿಂದ ಚುನಾವಣಾ ಪ್ರಕ್ರಿಯೇಗಳು ಮುಗಿಯುವವರೆಗೆ ಅರ್ಜಿಗಳನ್ನು ಸ್ವೀಕರಿಸುವುದು, ಸಂಸ್ಕರಿಸುವುದು ಹಾಗೂ ಮಂಜೂರಾತಿ ನೀಡಬಾರದೆಂಬ ಸೂಚನೆಗಳು ನೀಡಲಾಗಿದ್ದರೂ ಕೂಡಾ ಸಹ ಕಂದಾಯ ಇಲಾಖೆಯ ಸದರಿ ಉಪ ತಹಶೀಲ್ದಾರರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಸಂಧ್ಯಾ ಸುರಕ್ಷಾ, ವಿಧವಾ ವೇತನ ಹಾಗೂ ವೃದ್ಯಾಪ್ಯ ವೇತನ ಮಾಸಾಶನಗಳನ್ನು ಮಂಜೂರು ಮಾಡಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಹುದ್ದೆಯಿಂದ ಕೆಳಗಿಳಿಯುವುದು ಅತ್ಯಂತ ಸುಲಭ, ಆದರೆ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಗ್ಗೆ ಸರ್ಕಾರ ಮೂಲಗಳಿಂದ ಮಹತ್ವದ ಸುಳಿವು

ಬೆಳ್ತಂಗಡಿ ಸುಮಂತ್ ಸಾವು ಪ್ರಕರಣ: ಶಂಕಿತ ಆರೋಪಿಗಳ ಬ್ರೈನ್ ಮಾಪಿಂಗ್‌ಗೆ ಕೋರ್ಟ್‌ ಗ್ರೀನ್‌ ಸಿಗ್ನಲ್

ಕೊನೆಗೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಬಗ್ಗಿತಾ ಕೇಂದ್ರ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಸಮಯ ಕೇಳಿದ ಸರ್ಕಾರ

ವಿದ್ಯಾರ್ಥಿಯ ಮೇಲೆ ಪೆಲೆಟ್ ಗನ್, ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments