ಮತದಾನ ಮಾಡುವವರಿಗೆ ಇಲ್ಲಿ ಸಿಗುತ್ತಿದೆ ಬಂಪರ್ ಆಫರ್

Webdunia
ಬುಧವಾರ, 17 ಏಪ್ರಿಲ್ 2019 (10:16 IST)
ಬೆಂಗಳೂರು : ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಕೇವಲ ಸರ್ಕಾರ ಮಾತ್ರವಲ್ಲದೇ ಕೆಲವು ಜನರು ಹಾಗೂ ಸಂಘಸಂಸ್ಥೆಗಳು ಪ್ರಯತ್ನಿಸುತ್ತಿವೆ.


ಹೌದು. ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ತಪ್ಪದೇ ಮತದಾನ ಮಾಡಿದ ಸಿಲಿಕಾನ್ ಸಿಟಿ ಜನರಿಗೆ ಕೆಲವು ಸಂಸ್ಥೆಗಳು ಬಂಪರ್ ಆಫರ್ ಗಳನ್ನು ನೀಡುವುದಾಗಿ ತಿಳಿಸಿದೆ. ಇತ್ತಿಚೆಗಷ್ಟೇ ನಿಸರ್ಗ ಹೋಟೆಲ್ ಮತದಾನದ ದಿನ ಫ್ರೀ ಬೆಣ್ಣೆದೋಸೆ ಆಫರ್ ನೀಡಿತ್ತು. ಈಗ ಮತದಾನ ಮಾಡಿದವರಿಗೆ ಬೆಂಗಳೂರಿನ ಯಲಹಂಕದ ಸುಮತಿ ಜ್ಯುವೆಲ್ಲರಿ ಶಾಪ್‍ನಲ್ಲಿ ಏಪ್ರಿಲ್ 18 ರಿಂದ 26ರವರೆಗೆ ಚಿನ್ನ ಖರೀದಿಸಿದರೆ ನಿಮಗೆ ಅಷ್ಟೇ ಪ್ರಮಾಣದ ಬೆಳ್ಳಿ ಉಚಿತವಾಗಿ ನೀಡುವುದಾಗಿ ಜ್ಯುವೆಲ್ಲರಿ ಮಾಲೀಕರ ತಿಳಿಸಿದ್ದಾರೆ.


ಇನ್ನು ಯಲಹಂಕದ ರೇಡಿಯಲ್ ಡಯಗ್ನಾಸ್ಟಿಕ್ಸ್ ಸೆಂಟರ್‍ನಲ್ಲಿ ಮತದಾನ ಮಾಡಿದವರಿಗೆ ಉಚಿತವಾಗಿ ಮಧುಮೇಹ ಪರೀಕ್ಷೆ, ಕಿಡ್ನಿ ಪರೀಕ್ಷೆ, ರಕ್ತದೊತ್ತಡ ಪರೀಕ್ಷೆಗಳನ್ನು ಪಡೆಯಬಹುದಾಗಿದೆ. ಮತದಾನದ ಜಾಗೃತಿಗಾಗಿ ಈ ಸ್ಪೆಷಲ್ ಆಫರ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



          

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಣಿಪುರದಲ್ಲಿ ಕೊನೆಗೂ ರಾಷ್ಟ್ರಪತಿ ಆಳ್ವಿಕೆ ಅಂತ್ಯ, ಸಿಎಂ ಆಗಿ ಯುಮ್ನಾಮ್

ರಾಜ್ಯದ ಜನರಿಗೆ ನಿಮ್ಮ ಸರಣಿ ಹಗರಣ, ಆಡಳಿತ ವೈಫಲ್ಯಗಳ ದರ್ಶನವಾಗಲಿ

ಕಳೆದೊಂದು ವರ್ಷದಲ್ಲಿ ದ.ಕ, ಉಡುಪಿ ಜಿಲ್ಲೆಗಳಲ್ಲಿ ರಸ್ತೆ ಅಪಘಾತಕ್ಕೆ ಅಮೂಲ್ಯ ಜೀವಗಳು ಬಲಿಯಾಗಿದೆಷ್ಟು ಗೊತ್ತಾ

ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ಬಗ್ಗೆ ಎಂಬಿ ಪಾಟೀಲ್ ಸ್ಫೋಟಕ ಮಾಹಿತಿ

ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ, ಅಧಿಕಾರದ ಅಮಲಿನಲ್ಲಿ ಶಾಸಕನ ಗೂಂಡಾ ವರ್ತನೆ

ಮುಂದಿನ ಸುದ್ದಿ
Show comments