Webdunia - Bharat's app for daily news and videos

Install App

ಮಂಡ್ಯ ಡಿಸಿಗೆ ಬಿಜೆಪಿ ಮಾಡಿದ್ದೇನು?

Webdunia
ಬುಧವಾರ, 3 ಏಪ್ರಿಲ್ 2019 (19:44 IST)
ಮಂಡ್ಯ ಜಿಲ್ಲಾ ಚುನಾವಣಾಧಿಕಾರಿ ವಿರುದ್ಧ ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ದೂರು ಸಲ್ಲಿಸಿದೆ.

ದೂರು ಸಲ್ಲಿಸಿದ ಬಿಜೆಪಿ ವಕ್ತಾರ ಗೋ.ಮಧುಸೂಧನ್, ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ ಅವರ ನಾಮಪತ್ರವನ್ನು ಎರಡೆರಡು ಬಾರಿ ತಿದ್ದುಪಡಿ ಮಾಡಿಕೊಂಡು ಬರಲು ಕಾನೂನು ಬಾಹಿರವಾಗಿ ಅವಕಾಶ ಮಾಡಿಕೊಟ್ಟಿದ್ದಾರೆ. ಸುಮಲತಾ ಅವರ ಏಜೆಂಟ್ ಮದನ್ ಗೆ ಲಿಖಿತ ದೂರು ಸಲ್ಲಿಸುವಂತೆ ಹೇಳಿ, ಅವರು ದೂರು ಬರೆದು ಸಲ್ಲಿಸುವಷ್ಟರಲ್ಲಿ ನಿಖಿಲ್ ನಾಮಪತ್ರ ಅಂಗೀಕರಿಸಿದ್ದಾರೆ. ನಾಮಪತ್ರ ಪರಿಶೀಲನೆಯ ಸಂದರ್ಭದ ವಿಡಿಯೋ ಕೊಡುವ ವಿಷಯದಲ್ಲೂ ನಿರ್ಲಕ್ಷ್ಯ ತೋರಿಸಿದ್ದಾರೆ‌.

ಮಂಡ್ಯದಲ್ಲಿ ಇವರಿಂದ ಪಾರದರ್ಶಕವಾದ ನ್ಯಾಯಸಮ್ಮತ ಚುನಾವಣೆ ನಿರೀಕ್ಷೆ ಇಲ್ಲ. ಹಾಗಾಗಿ ಮಂಡ್ಯ ಜಿಲ್ಲಾ ಚುನಾವಣಾಧಿಕಾರಿ ಮಂಜುಶ್ರೀ ಹಾಗೂ ವೀಕ್ಷಕ ರಂಜೀತ್ ಕುಮಾರ್ ಅವರನ್ನು ಬದಲಾವಣೆ ಮಾಡಲು ಒತ್ತಾಯಿಸಿದ್ದೇವೆ.

ಈಗಾಗಲೇ ಈ ಸಂಬಂಧ ಕೇಂದ್ರ ಚುನಾವಣಾ ಆಯೋಗಕ್ಕೆ ತನಿಖಾ ವರದಿ ಸಲ್ಲಿಸಿದ್ದು, ಅವರೂ ಸಹ ಶೀಘ್ರದಲ್ಲೇ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಸಂಜೀವ್ ಕುಮಾರ್ ಕೂಡ ಭರವಸೆ ನೀಡಿದ್ದಾರೆ ಎಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments