Webdunia - Bharat's app for daily news and videos

Install App

ಎಲೆಕ್ಷನ್ ನಲ್ಲಿ ಮಠಾಧೀಶರ ಬೆಂಬಲ ಯಾರಿಗೆ?

Webdunia
ಶನಿವಾರ, 20 ಏಪ್ರಿಲ್ 2019 (16:44 IST)
ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಹಾಗೂ ಹಾಲಿ ಸಂಸದರ ವಿರುದ್ಧ ಸ್ವಾಮೀಜಿಗಳಿಂದ ಆಕ್ರೋಶ ವ್ಯಕ್ತವಾಗಿದೆ.

ಕಳೆದ 15 ವರ್ಷಗಳಿಂದ ಬಿಜೆಪಿ ಸಂಸದರ ಕೊಡುಗೆ ಕ್ಷೇತ್ರಕ್ಕೆ ಶೂನ್ಯ ಅಂತ ಮಠಾಧೀಶರು ಆರೋಪ ಮಾಡಿದ್ದು, ಕೈ ಅಭ್ಯರ್ಥಿ ಪರ ಬೆಂಬಲ ಸೂಚಿಸಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಪ್ರಲ್ಹಾದ್ ಜೋಶಿ ಸಾಧನೆ ಶೂನ್ಯವಾಗಿದೆ. ಹೀಗಾಗಿ ಇಲ್ಲಿ ನಾವು ಅನಿವಾರ್ಯವಾಗಿ  ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿಗೆ ಬೆಂಬಲ ನೀಡುತ್ತಿದ್ದೇವೆ.  ಹೀಗಂತ  ಹುಬ್ಬಳ್ಳಿಯ ಪತ್ರಿಕಾ ಭವನದಲ್ಲಿ ಮಾತನಾಡಿದ ವಿವಿಧ ಮಠದ ಮಠಾಧೀಶರು ಹೇಳಿದ್ರು.

ವಿನಯ ಕುಲಕರ್ಣಿಗೆ ಬೆಂಬಲವನ್ನು ಸೂಚಿಸಿದ ಧಾರವಾಡ ಜಿಲ್ಲೆಯ ಮಠಾಧೀಶರು ಮೈತ್ರಿ ಸರಕಾರದ ಅಭ್ಯರ್ಥಿ ಗೆಲ್ಲಬೇಕೆಂದರು.

ವಿನಯ ಕುಲಕರ್ಣಿ ಇನ್ನು ಉತ್ಸಾಹಿ ಯುವಕರ ರೀತಿಯಲ್ಲಿ ಇದ್ದು, ರೈತರ ಪರ ವಿದ್ಯಾರ್ಥಿಗಳ ಪರವಾಗಿ ವಿಶೇಷವಾದ ಒಲುವನ್ನು ಹೊಂದಿದ್ದಾರೆ. ಹೀಗಾಗಿ ಇಂದಿನ ಜನತೆಗೆ ಬೇರೆ ರೀತಿಯಾಗಿ ಕಾರ್ಯ ನಿರ್ವಹಿಸುವ ನೇತಾರರು ಬೇಕಾಗಿದ್ದಾರೆ. ಹೀಗಾಗಿ ನಾವೆಲ್ಲ ಮಠಾಧೀಶರು ಸಮ್ಮಿಶ್ರ ಸರ್ಕಾರದ ಬೆಂಬಲಿತ ಅಭ್ಯರ್ಥಿಯಾದ ವಿನಯ ಕುಲಕರ್ಣಿಗೆ ಬೆಂಬಲವನ್ನು ಕೊಡುತ್ತಿದ್ದೇವೆ ಎಂದು ಹೇಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments