Select Your Language

Notifications

webdunia
webdunia
webdunia
Friday, 11 April 2025
webdunia

ಸಂವಿಧಾನ ಸುಡುತ್ತೇವೆ ಎನ್ನುವ ಬಿಜೆಪಿಯವರಿಗೆ ಬೆಂಬಲ ಸೂಚಿಸುತ್ತಿರುವ ನಿಮಗೆ ನಾಚಿಕೆಯಾಗಲ್ವಾ- ಸ್ಪೀಕರ್ ವಿರುದ್ಧ ಮುನಿಯಪ್ಪ ವಾಗ್ದಾಳಿ

ಕೋಲಾರ
ಕೋಲಾರ , ಮಂಗಳವಾರ, 16 ಏಪ್ರಿಲ್ 2019 (09:40 IST)
ಕೋಲಾರ : ಸಂಸದ, ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಅವರು ವಿರೋಧಿ ಬಣದ ದಲಿತ ಮುಖಂಡರು ಹಾಗೂ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ನಗರದಲ್ಲಿ ಮಾಜಿ ಶಾಸಕ ವರ್ತೂರ್ ಪ್ರಕಾಶ್ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ಒಂದು ಸ್ಥಾನದಲ್ಲಿ ಇದ್ದುಕೊಂಡು ಸರ್ಕಾರನ್ನು ಹಾಗೂ ಸಿಎಂ ಕುಮಾರಸ್ವಾಮಿ ಅವರನ್ನು ಪ್ರಶ್ನೆ ಮಾಡುತ್ತೀರಿ. ನಿಮಗೇನಾದರೂ ತಾಕತ್ತು ಇದ್ದರೆ ನಿಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಚುನಾವಣೆ ಕಣಕ್ಕೆ ಬನ್ನಿ ಎಂದು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಸವಾಲು ಹಾಕಿದ್ದಾರೆ.


ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರು ಹೇಳಿಕೊಂಡು 30 ವರ್ಷ ಜೀವನ ಮಾಡಿದ್ದೀರಿ. ಆದರೆ ಈಗ ಸಂವಿಧಾನ ಸುಡುತ್ತೇವೆ ಎನ್ನುವ ಬಿಜೆಪಿಯವರಿಗೆ ಬೆಂಬಲ ಸೂಚಿಸುತ್ತಿರುವ ನಿಮಗೆ ನಾಚಿಕೆಯಾಗಲ್ವಾ? ನೀವು ಹೋರಾಟಗಾರರಾ? ಸಮಾಜ ಸೇವಕರಾ? ಸತ್ಯಕ್ಕೆ ಕಾಲವಿದೆ. ಈ ನೀಚರಿಗೆ ಜನ ಬುದ್ಧಿ ಕಲಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ


 

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿರುವುದು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಲ್ಲ, ದೇವೇಗೌಡರ ಕುಟುಂಬದ ಸರ್ಕಾರ- ರೇಣುಕಾಚಾರ್ಯ ಕಿಡಿ