Select Your Language

Notifications

webdunia
webdunia
webdunia
webdunia

ಬಿಜೆಪಿಗೆ ಬಿಗ್ ಶಾಕ್; ಪಕ್ಷದ ಇಬ್ಬರು ನಾಯಕರು ಇಂದು ಕಾಂಗ್ರೆಸ್ ಗೆ ಸೇರ್ಪಡೆ

ಬಿಜೆಪಿಗೆ ಬಿಗ್  ಶಾಕ್; ಪಕ್ಷದ ಇಬ್ಬರು ನಾಯಕರು ಇಂದು ಕಾಂಗ್ರೆಸ್ ಗೆ ಸೇರ್ಪಡೆ
ಕಲಬುರ್ಗಿ , ಶುಕ್ರವಾರ, 29 ಮಾರ್ಚ್ 2019 (10:20 IST)
ಕಲಬುರ್ಗಿ : ಬಿಜೆಪಿಗೆ ರಾಜೀನಾಮೆ ನೀಡಿದ್ದ ಬಂಜಾರ ಸಮುದಾಯದ ಹಿರಿಯ ನಾಯಕರಾದ ಮಾಜಿ ಸಚಿವ ಬಾಬುರಾವ್ ಚವ್ಹಾಣ್ ಹಾಗೂ ಸುಭಾಷ್ ರಾಠೋಡ್ ಇಂದು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಉಮೇಶ್ ಜಾಧವ್ ಗೆ ಟಿಕೆಟ್ ಘೋಷಣೆಯಿಂದ ಅಸಮಾಧಾನಗೊಂಡು ಮಾಜಿ ಸಚಿವ ಬಾಬುರಾವ್ ಚವ್ಹಾಣ್ ಹಾಗೂ ಸುಭಾಷ್ ರಾಠೋಡ್ ಬಿಜೆಪಿಗೆ ರಾಜೀನಾಮೆ ನೀಡಿದ್ದರು. ಇದೀಗ ಈ ಇಬ್ಬರು ನಾಯಕರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆಯಾಲಿದ್ದಾರೆ ಎನ್ನಲಾಗಿದೆ.


ಇಂದು ಚಿಂಚೋಳಿ ಪಟ್ಟಣದಲ್ಲಿ ಆಯೋಜಿಸಿರುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಸಂಸದ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಉಭಯ ನಾಯಕರು ಮತ್ತವರ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆಗೊಳ್ಳುವುದರ ಮೂಲಕ , ಬಿಜೆಪಿಗೆ ಬಿಗ್  ಶಾಕ್ ನೀಡಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮುಸ್ಲಿಮರ ವೋಟು ಬೇಡ ಎಂದ ಅನಂತಕುಮಾರ್ ಹೆಗಡೆ ಈಗ ಮಾಡುತ್ತಿರುವುದೇನಂತೆ ಗೊತ್ತಾ?