Webdunia - Bharat's app for daily news and videos

Install App

ಅಣ್ಣ ತಂಗಿಯರ ಭಾವ ಸಂಬಂಧದ ನಾಗಪಂಚಮಿ

Webdunia
ಬುಧವಾರ, 6 ಆಗಸ್ಟ್ 2008 (18:21 IST)
NRB
ನಾಗರ ಪಂಚಮಿ ಮತ್ತೆ ಬಂದಿದೆ. ಶ್ರಾವಣದ ಹಬ್ಬಗಳ ಸಾಲಿಗೆ ಮುನ್ನುಡಿ. ಸಾಲು ಹಬ್ಬಗಳ ಪೈಕಿ ಮೊದಲನೆಯದು ನಾಗಪಂಚಮಿ. ಬುಧವಾರ ನಾಡಿನಾದ್ಯಂತ ಸಂಭ್ರಮ ಸಂತೋಷದಿಂದ ಮನೆಯವರೆಲ್ಲಾ ಜೊತೆಗೂಡಿ ನಾಗರ ಪಂಚಮಿ ಆಚರಿಸಿದರು.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಬೆಳಿಗ್ಗಿನಿಂದಲೇ ಮನೆಯವರೆಲ್ಲಾ ಸೇರಿ ನಾಗನ ಹುತ್ತಕ್ಕೆ ಹಾಲು ಎರೆಯುವ ಮೂಲಕ ಪೂಜೆ ಮಾಡುತ್ತಿರುವ ದೃಶ್ಯ ಎಲ್ಲೆಡೆ ಕಂಡು ಬಂದಿತ್ತು.

ನಾಗರ ಪಂಚಮಿ ಎರಡು ಆಚರಣೆಗಳಲ್ಲಿ ಒಂದು ನಾಗರಪೂಜೆ ಇನ್ನೊಂದು ಸಹೋದರ ಸಹೋದರಿಯರ ಭಾವ ಸಂಬಂಧಗಳು ಮುಖ್ಯವಾದವು. ಸಹೋದರಿಯರು ಸಹೋದರರ ಬೆನ್ನಿಗೆ ಹಾಲು, ನೀರು ಎರೆಯುವ ಮೂಲಕ ತವರು ತಂಪಾಗಿರಲಿ ಎಂದು ಹಾರೈಸಿದರೆ, ಸಹೋದರರು ಪ್ರೀತಿಯ ಅಕ್ಕ ತಂಗಿಯರಿಗೆ ಉಡುಗೊರೆ ಕೊಟ್ಟು ಸಂಭ್ರಮಿಸುತ್ತಾರೆ.

NRB
ಉತ್ತರ ಭಾರತದಲ್ಲಿ ರಕ್ಷಾ ಬಂಧನ ವೇದಿಕೆಯಾದರೆ, ದಕ್ಷಿಣ ಭಾರತದಲ್ಲಿ ನಾಗರ ಪಂಚಮಿ. ಅಲ್ಲದೆ, ಮಗಳು ಬಂದ ಸಂಭ್ರಮದಲ್ಲಿ ತವರು ಮನೆಯಲ್ಲಿ ಹಬ್ಬದ ರಂಗೇರುತ್ತದೆ.

ಭಾರತೀಯ ಪರಂಪರೆಯಲ್ಲಿ ನಾಗರ ಹಾವನ್ನು ದೈವಸ್ವರೂಪವೆಂದು ನಂಬಲಾಗುತ್ತಿದೆ. ಅಂತೆಯೇ ನಾಗರವು ಆದಿಶೇಷನ ಅವತಾರ ಎಂದು ಪುರಾಣ ತಿಳಿಸುತ್ತದೆ. ಆದರೆ ಹಾವಿನ ಹುತ್ತಕ್ಕೆ ಹಾಲೆರೆಯುವುದರಿಂದ ಹಾವು ಸಂತತಿ ನಾಶಗೊಳ್ಳುತ್ತದೆ ಎಂಬುದು ಹಾವು ತಜ್ಞರ ಅಭಿಪ್ರಾಯ.

ಅರಶಿಣ, ಕುಂಕುಮಗಳ ವಾಸನೆಯಿಂದ ಹಾವುಗಳು ಸಾವನ್ನಪ್ಪುತ್ತದೆ ಎಂಬುದು ಅವರ ಅಂಬೋಣ. ಅಂತೂ ನಾಗರ ಪಂಚಮಿ ಇಂದು ಎಲ್ಲ ಕಡೆ ಸಡಗರದಿಂದ ಆಚರಿಸುತ್ತಿದ್ದಾರೆ.

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

Show comments