Webdunia - Bharat's app for daily news and videos

Install App

ರಾಜ್ಯಾದ್ಯಂತ ಎಲ್ಲೆಡೆ ವ್ಯಾಪಕ ಮಳೆ

Webdunia
ಸೋಮವಾರ, 28 ಜೂನ್ 2021 (14:09 IST)
ರಾಜ್ಯಾದ್ಯಂತ ಭಾನುವಾರವೂ ರಜೆ ಕೊಡದ ಮಳೆರಾಯ ಎಲ್ಲೆಡೆ ವ್ಯಾಪಕ ಮಳೆ ಸುರಿಸಿದ್ದಾನೆ. ನಗರದಲ್ಲೂ ಬೆಳಗಿನಿಂದ ಮೋಡ ಕವಿದ ವತಾವರಣವಿದ್ದು ಯಾವುದೇ ಸಂಜೆಯ ನಂತರ ಮಳೆಯಾಗುವ ಸಾಧ್ಯತೆ ಕಂಡು ಬರುತ್ತಿದೆ.
ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ಹವಾಮಾನ ಸ್ಥಿಗತಿಗಳ ಬಗ್ಗೆ ಮಾಹಿತಿ ನೀಡಿದ್ದು ಮುಖ್ಯವಾಗಿ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ 14 ಸೆಂ.ಮೀ, ಮುದುಗಲ್ 7, ಕಾರ್ಕಳ ಮತ್ತು ದಾವಣಗೆರೆಯಲ್ಲಿ 6 ಸೆಂ.ಮೀ ಇಂದು ಮಳೆಯಾಗಿದೆ ಎಂದು  ಮಾಹಿತಿ ನೀಡಿದ್ದಾರೆ.
 
ಕರಾವಳಿ ಜಿಲ್ಲೆಯಲ್ಲಿ ಜೂನ್ 27ರಿಂದ ಜುಲೈ 1ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಜೂನ್ 27 ಮತ್ತು 28 ರಂದು ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಜೂನ್ 29ರಿಂದ ಜುಲೈ 1 ರವರೆಗೆ ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆಯಿದೆ ಎಂದಿದ್ದಾರೆ.
 
ಹೈದರಾಬಾದ್ ಕರ್ನಾಟಕ ಜಿಲ್ಲೆಗಳಾದ ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಯ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮುಂದಿನ 24 ಗಂಟೆಗಳ ವರೆಗೆ ಎಲ್ಲೋ ಅಲರ್ಟ್ ಕೊಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಜುಲೈ 1ರವರೆಗೆ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಸಿ.ಎಸ್ ಪಾಟೀಲ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ
Show comments