Webdunia - Bharat's app for daily news and videos

Install App

ಉತ್ತಮ ಆರೋಗ್ಯಕ್ಕೆ ರಾಮಬಾಣ ಸರ್ವಕಾಲಿಕ ತರಕಾರಿ ಸೊಪ್ಪುಗಳು

Webdunia
ಮಂಗಳವಾರ, 4 ಅಕ್ಟೋಬರ್ 2016 (14:39 IST)
ಬೇಸಿಗೆ ಬಂತೆಂದರೆ ಉಷ್ಣ ಪ್ರಕೃತಿಯವರ ಪಾಡು ಹೇಳಿ ತೀರದು. ಸೂಕ್ಷ್ಮ ದೇಹ ಪ್ರಕೃತಿಯ ಇಂತಹವರಿಗೆ ಎಲ್ಲಾ ಹವಾಮಾನ ಬದಲಾವಣೆಗಳಲ್ಲೂ ಶಾರೀರಿಕ ಅಸ್ವಾಸ್ಥ್ಯ ಅನುಭವಿಸುತ್ತಾರೆ. ಇವರಿಗೆ ಸೊಪ್ಪು ಚಿಗುರೆಲೆಗಳ ಮೇಲೋಗರ ಸಾಂತ್ವನ ನೀಡುತ್ತದೆ.
ವಿವಿಧ ಮರಗಳ ಚಿಗುರನ್ನು ಸಂಗ್ರಹಿಸಿ ನೀರು-ಚಟ್ನಿಯಾಗಿ ಅರೆದು ಬಳಸುವುದು ಬೇಸಗೆ ಕಾಲದಲ್ಲಿ ಆರೋಗ್ಯ ಸಂರಕ್ಷಣೆಗೆ ಉಪಯುಕ್ತ. ಪೇರಳೆ,ದಡಸೆ,ಮಾವು ಇತ್ಯಾದಿಗಳನ್ನು ತೆಂಗಿನ ತುರಿ, ಉಪ್ಪು ಇತ್ಯಾದಿಗಳನ್ನು ಸೇರಿಸಿ ಅರೆದು ತಯಾರಿಸುವ ಮೇಲೋಗರ ಅಧರಕ್ಕೂ ಉದರ್ಕೂ ಹಿತಕರವಾಗಿರುತ್ತದೆ.
 
ನೀರುಬೀಳುವ ಜವುಗು ನೆಲದಲ್ಲಿ ಸಮೃದ್ಧವಾಗಿ ಬೆಳೆಯುವ ಒಂದೆಲಗ (ತಿಮರೆ) ಗಿಡದ ಸಸ್ಯದ ಎಲೆ ಸಂಗ್ರಹಿಸಿ ನೀರು ಚಟ್ನಿಯಾಗಿ ಅರೆದು ಅನ್ನ , ದೋಸೆ ಇತ್ಯಾದಿಗಳಿಗೆ ಸೇರಿಕೆಯಾಗಿ ಸೇವಿಸುವುದು ಆಹಾರವೂ ಹೌದು ಔಷಧವೂ ಹೌದು. ಬೇಸಗೆಯಲ್ಲಿ ಒಂದೆಲಗ ನೀರು ಚೆಲ್ಲುವ ಪ್ರದೇಶಗಳಲ್ಲಿ ಮಾತ್ರ ಕಾಣಸಿಗುತ್ತದೆ.
ಇದೇ ರೀತಿ ಬಸಲೆ, ಹರಿವೆ ಇತ್ಯಾದಿ ಹಸುರೆಲೆಗಳೂ ಸೇರಿದಂತೆ ವಿವಿಧ ಸೊಪ್ಪು, ಚಿಗುರುಗಳನ್ನು ಸೇವಿಸುವುದರಿಂದ ಆಹಾರದ ರುಚಿಯೂ ಹೆಚ್ಚುತ್ತದೆ. ಆರೋಗ್ಯ ಸಂರಕ್ಷಣೆಯೂ ಆಗುತ್ತದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments