Webdunia - Bharat's app for daily news and videos

Install App

ಸರಿಯಾಗಿ ನಿದ್ರೆ ಬರುತ್ತಿಲ್ವಾ? ಟ್ರೈ ಮಾಡಿ...

Webdunia
ಭಾನುವಾರ, 12 ಡಿಸೆಂಬರ್ 2021 (12:13 IST)
‘ಚಿಂತೆ ಇಲ್ಲದವನಿಗೆ ಸಂತೆಯಲ್ಲೂ ನಿದ್ದೆ ಎಂಬುದೊಂದು ಗಾದೆ’. ಆದರೆ ಈ ಪುಣ್ಯವಿರುವ ವ್ಯಕ್ತಿಗಳು ಈ ಜಗತ್ತಿನಲ್ಲಿ ನಗಣ್ಯ.

ಎಲ್ಲರೂ ಒತ್ತಡದ ಜೀವನಶೈಲಿ, ಮನೆಯಲ್ಲಿ ಸಂಸಾರದ ತಾಪತ್ರಯ, ಕೆಲಸದಲ್ಲಿ ಒತ್ತಡ, ಹೀಗೆ ನಾನಾ ಸಮಸ್ಯೆಗಳಿಂದ ಸರಿಯಾಗಿ ನಿದ್ದೆ ಬರದೇ ತಮ್ಮ ಆರೋಗ್ಯವೇ ಹಾಳು ಮಾಡಿಕೊಳ್ಳುತ್ತಿದ್ದರೆ!
ಒಂದು ವೇಳೆ ನಿಮಗೂ ಆಗಾಗ ನಿದ್ರಾರಾಹಿತ್ಯದ ತೊಂದರೆ ಎದುರಾಗಿದ್ದರೆ ಅಥವಾ ಮಲಗಿದಾಕ್ಷಣ ನಿದ್ದೆ ಬರುತ್ತಿಲ್ಲವಾದರೆ ಕೆಳಗೆ ವಿವರಿಸಿರುವ ಕೆಲವು ಸುಲಭ ವಿಧನಗಳಲ್ಲಿ ನಿಮಗೆ ಸೂಕ್ತವಾದುದನ್ನು ಅನುಸರಿಸಬಹುದು.

ಜೇನು ಬೆರೆಸಿದ ಹಾಲು
ಹಾಲಿನಲ್ಲಿರುವ ಟ್ರಿಫ್ಟೋಫ್ಯಾನ್ ಎಂಬ ಪೋಷಕಾಂಶವನ್ನು ದೇಹ ಹೀರಿಕೊಳ್ಳುವಂತಾಗಲು ಜೇನು ನೆರವು ನೀಡುತ್ತದೆ. ತನ್ಮೂಲಕ ಮೆದುಳಿಗೆ ಮುದನೀಡುವ ರಸದೂತದ ಮಟ್ಟವನ್ನು ಹೆಚ್ಚಿಸಲು ಹಾಗೂ ಸುಖನಿದ್ದೆ ಪಡೆಯಲು ನೆರವಾಗುತ್ತದೆ.
 ಬಾಳೆಹಣ್ಣು ತಿಂದು ಮಲಗಿ

ಬಾಳೆಹಣ್ಣಿನಲ್ಲಿ ಕಬ್ಬಿಣ, ಕ್ಯಾಲ್ಸಿಯಂ, ಪೊಟ್ಯಾಶಿಯಂ ಮೊದಲಾದ ಖನಿಜಗಳಿದ್ದು ಉತ್ತಮ ನಿದ್ದೆಗೆ ಸಹಕಾರಿಯಾಗಿವೆ. ಹಾಲು ಇಲ್ಲದಿದ್ದರೆ ಕೊಂಚ ಜೇನಿನೊಂದಿಗೂ ಸೇವಿಸಬಹುದು.
ಗಿಡ ಮೂಲಿಕೆಗಳ ಟೀ

ರಾತ್ರಿ ಮಲಗುವ ಮುನ್ನ ಹಾಲು ಬೆರೆಸಿದ ಟೀ ಕುಡಿದರೆ ನಿದ್ದೆ ಬರುವುದಿಲ್ಲ. ಬದಲಿಗೆ ನಿಮ್ಮ ಆಯ್ಕೆಯ ಗಿಡಮೂಲಿಕೆಗಳನ್ನು ಕುದಿಸಿ ತಯಾರಿಸಿದ ಟೀ ಕುಡಿಯುವ ಮೂಲಕ ದೇಹವನ್ನು ನಿರಾಳಗೊಳಿಸಿ ಸುಲಭನಿದ್ದೆ ಪಡೆಯಲು ಸಾಧ್ಯವಾಗುತ್ತದೆ.
ಪ್ರತಿ ರಾತ್ರಿ ಅರಿಶಿನ ಮಿಶ್ರಿತ ಹಾಲು ಕುಡಿಯುವ ಅಭ್ಯಾಸದಿಂದ ನಿದ್ರೆಯಲ್ಲಿ ಆಗಾಗ ಎಚ್ಚರಗೊಳ್ಳುವುದು ತಪ್ಪುತ್ತದೆ.

ರಾತ್ರಿಯ ಸಮಯದಲ್ಲಿ ಆಗಾಗ ಮೂತ್ರ ವಿಸರ್ಜನೆ ಮಾಡಲು ಬಾತ್ ರೂಮ್ ಕಡೆಗೆ ಮುಖ ಮಾಡುವುದರಿಂದ ನಿದ್ರೆಗೆ ಸಾಕಷ್ಟು ಭಂಗವಾಗುತ್ತದೆ. ಈ ಅಭ್ಯಾಸವನ್ನು ಹಾಲಿಗೆ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ತಪ್ಪಿಸಬಹುದು.
ಧ್ಯಾನ

ಧ್ಯಾನದಿಂದ ನಿದ್ರಾವಧಿ ಹೆಚ್ಚಾಗುವುದರ ಜೊತೆಗೆ ನಿದ್ರೆಯ ಗುಣಮಟ್ಟ ಕೂಡ ಹೆಚ್ಚಾಗಿ ರಾತ್ರಿಯ ಸಮಯದಲ್ಲಿ ಆಗಾಗ ಎಚ್ಚರಗೊಳ್ಳುವುದು ತಪ್ಪುತ್ತದೆ. ಅದು ಅಲ್ಲದೆ ಧ್ಯಾನ ಮಾಡುವುದರಿಂದ ಯಾವುದೇ ಅಡ್ಡ ಪರಿಣಾಮಗಳು ಎಂದಿಗೂ ಉಂಟಾಗುವುದಿಲ್ಲ.

ಧ್ಯಾನ ಮಾಡುವಾಗ ದೀರ್ಘವಾಗಿ ಉಸಿರಾಟ ನಡೆಸುವುದರಿಂದ ರಾತ್ರಿಯ ಸಮಯದಲ್ಲಿ ಗೊರಕೆ ಹೊಡೆಯುವುದು ಕೂಡ ತಪ್ಪುತ್ತದೆ. ಆದ್ದರಿಂದ ಪ್ರತಿಯೊಬ್ಬರು ಪ್ರತಿ ದಿನ ಸುಮಾರು 10 ರಿಂದ 15 ನಿಮಿಷಗಳ ಕಾಲ ಧ್ಯಾನ ಮಾಡುವುದನ್ನು ರೂಢಿ ಮಾಡಿಕೊಳ್ಳಬೇಕು

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments