Webdunia - Bharat's app for daily news and videos

Install App

ವಾಲ್ನಟ್ ಸೇವಿಸುವುದರಿಂದ ಮಧುಮೇಹ ನಿಯಂತ್ರಿಸಬಹುದೇ?

Webdunia
ಶುಕ್ರವಾರ, 15 ಅಕ್ಟೋಬರ್ 2021 (07:17 IST)
ಆರೋಗ್ಯಕರ ವಾಲ್ನಟ್ ಬೀಜಗಳು ಆರೋಗ್ಯಕ್ಕೆ ಉತ್ತಮ ಪೋಷಕಾಂಶವನ್ನು ನೀಡುತ್ತದೆ. ದೇಹದ ಶಕ್ತಿ ಹೆಚ್ಚಿಸಿಕೊಳ್ಳಲು ಇದು ಸಹಾಯಕ. ವಾಲ್ನಟ್ ನಿಮ್ಮ ಮೆದುಳಿನ ಆರೋಗ್ಯದ ಮತ್ತು ನಿಮ್ಮ ಒಟ್ಟಾರೆ ಆರೋಗ್ಯಕ್ಕೆ ಉತ್ತಮ.

ಹಾಗಿರುವಾಗ ವಾಲ್ನಟ್ಅನ್ನು ನೆನೆಸಿಟ್ಟು ಬಳಿಕ ಸೇವಿಸುವ ಮೂಲಕ ಆರೋಗ್ಯಕ್ಕೆ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂಬುದನ್ನು ತಿಳಿದುಕೊಳ್ಳಿ.
ಆರೋಗ್ಯ ತಜ್ಞರ ಪ್ರಕಾರ ಗಟ್ಟಿಯಾದ ಆಹಾರಕ್ಕಿಂತ ಮೃದುವಾದ ಆಹಾರ ಜೀರ್ಣ ವ್ಯವಸ್ಥೆಗೆ ಸಹಾಯಕಾರಿ. ಹಾಗಾಗಿ ಗಟ್ಟಿಯಾದ ವಾಲ್ನಟ್ ಬೀಜಗಳ ಸೇವನೆಗಿಂತ ನೀರಿನಲ್ಲಿ ನೆನೆಸಿಟ್ಟ ವಾಲ್ನಟ್ಅನ್ನು ಸೇವಿಸುವ ಮೂಲಕ ಆರೋಗ್ಯ ಪ್ರಯೋಜನಗಳು ಹೆಚ್ಚಿರುತ್ತವೆ. ಜತೆಗೆ ಇದು ಜೀರ್ಣ ಕ್ರಿಯೆಗೆ ಸಹಾಯಕಾರಿ.
ಟೈಪ್2 ಡಯಾಬಿಟಿಸ್ ಸಸ್ಯೆ ನಿಯಂತ್ರಣಕ್ಕೆ ನೆನೆಸಿದ ವಾಲ್ನಟ್ ಒಳ್ಳೆಯದು. ವಾಲ್ನಟ್ ಬೀಜಗಳಲ್ಲಿ ಒಳ್ಳೆಯ ಫೈಬರ್ ಮತ್ತು ದೇಹದಲ್ಲಿ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಶಕ್ತಿಯಿದೆ. ಇನ್ಸುಲಿನ್ ಮಟ್ಟವನ್ನು ನಿಯಂತ್ರಿಸಲು ಮತ್ತು ದೇಹದಲ್ಲಿ ರಕ್ತದೊತ್ತಡ ನಿಯಂತ್ರಕ್ಕೆ ಇದು ತುಂಬಾ ಸಹಾಯಕವಾಗಿದೆ. ಹಾಗಾಗಿ ನೆನೆಸಿಟ್ಟ ವಾಲ್ನಟ್ಅನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ.
ಒಮೆಗಾ 3 ವಾಲ್ನಟ್ನಲ್ಲಿ ಕಂಡು ಬರುತ್ತದೆ. ಇದು ನಿಮ್ಮ ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಜತೆಗೆ ನಿಮ್ಮ ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ. ವಾಲ್ನಟ್ನಲ್ಲಿ ನೈಸರ್ಗಿಕ ಎಣ್ಣೆಯ ಅಂಶವಿದ್ದು, ಇದು ನಿಮ್ಮ ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೆ ಉತ್ತಮ. ಜತೆಗೆ ಕ್ಯಾನ್ಸರ್ ವಿರುದ್ಧ ಹೋರಾಡುವ ಶಕ್ತಿಯನ್ನು ಹೊಂದಿದೆ. ಹಾಗಾಗಿ ದೇಹಕ್ಕೆ ಉತ್ತಮ ಪೋಷಕಾಂಶಗಳನ್ನು ನೀಡುವ ಮತ್ತು ಕೆಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸುವ ಗುಣಹೊಂದಿರುವ ವಾಲ್ನಟ್ ಸೇವನೆಯನ್ನು ರೂಢಿಯಲ್ಲಿಟ್ಟುಕೊಳ್ಳಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

ಬಾಳೆಕಾಯಿ ಹಚ್ಚಿ ಕೈ ಕಪ್ಪಗಾಗಿದ್ದರೆ ಈ ಸಿಂಪಲ್ ಟ್ರಿಕ್ ಉಪಯೋಗಿಸಿ

ಮುಂದಿನ ಸುದ್ದಿ
Show comments