ಕೋಪ ಬಂದರೆ ಇದನ್ನು ತಪ್ಪದೇ ಮಾಡಿ ನೋಡಿ

Webdunia
ಭಾನುವಾರ, 10 ಸೆಪ್ಟಂಬರ್ 2017 (07:59 IST)
ಬೆಂಗಳೂರು: ಸಿಟ್ಟು.. ಯಾರಿಗೆ ತಾನೇ ಬರಲ್ಲ? ಕೆಲವರು ಸಣ್ಣ ಪುಟ್ಟ ವಿಷಯಕ್ಕೂ ಅತಿಯಾಗಿ ಸಿಟ್ಟು ಮಾಡಿಕೊಂಡು ಸಂಬಂಧವನ್ನೇ ಹಾಳು ಮಾಡಿಕೊಳ್ಳುತ್ತಾರೆ. ಹಾಗಾದರೆ ಸಿಟ್ಟು ಕಂಟ್ರೋಲ್ ಮಾಡಬೇಕಾದರೆ ಇವುಗಳನ್ನು ಮಾಡಿ ನೋಡಿ.

 
ಮಾತಾಡುವ ಮೊದಲು ಯೋಚಿಸಿ
ಮಾತು ಆಡಿದರೆ ಮುತ್ತು, ಒಡೆದರೆ ಹೋಯ್ತು ಅಂತಾರೆ. ಹಾಗಾಗಿ ಯಾರೊಂದಿಗೆ ಏನೇ ಮಾತನಾಡಬೇಕಾದರೂ ಯೋಚಿಸಿ ಮಾತನಾಡಿ. ಎಲ್ಲರೊಂದಿಗೂ ನಾನು ಹೀಗೇ ಮಾತನಾಡುವುದು ಎಂಬ ಉದ್ಧಟತನ ತೋರಬೇಡಿ. ಸಮಯ ಸಂದರ್ಭಕ್ಕೆ ತಕ್ಕಂತೆ ಮಾತು, ವರ್ತನೆ ಇರಲಿ.

ಮೌನವಾಗಿರಿ
ಕೋಪ ಬಂದಾಗ ಮೌನವಾಗಿರುವುದೇ ಒಳ್ಳೆಯದು. ಕೋಪದ ಭರದಲ್ಲಿ ಕೈಗೊಳ್ಳುವ ನಿರ್ಧಾರಗಳು ಯಾವತ್ತೂ ಸೂಕ್ತವಾಗಿರುವುದಿಲ್ಲ. ಹಾಗಾಗಿ ಮಾತನಾಡುವ ಬದಲು ಮೌನವಾಗಿದ್ದು, ನಂತರ ನಿಮಗೆ ಏಕೆ ಕೋಪ ಬಂದಿದೆ ಎಂಬುದನ್ನು ವಿಮರ್ಶಿಸಿ. ಸಾಧ್ಯವಾದರೆ ನಿಮ್ಮ ಕೋಪಕ್ಕೆ ಕಾರಣವಾದವರೊಂದಿಗೆ ಶಾಂತವಾದೊಡನೆ ಕಾರಣ ಚರ್ಚಿಸಿ.

ಹೊರಗೆ ಹೋಗಿ
ಕೋಪ ಬಂದ ತಕ್ಷಣ ಕೂಗಾಡುವ ವ್ಯಕ್ತಿಗಳು ನೀವಾಗಿದ್ದರೆ, ಆ ಸ್ಥಳದಿಂದ ಜಾಗ ಖಾಲಿ ಮಾಡುವುದು ಒಳ್ಳೆಯದು. ಆ ಸಂದರ್ಭದಲ್ಲಿ ಹೊರಗಡೆ ಒಂದು ವಾಕಿಂಗ್ ಹೋಗಿ. ಇದರಿಂದ ಮನಸ್ಸೂ ಸ್ವಲ್ಪ ಹಗುರವಾಗುತ್ತದೆ. ಹಾಗೆಯೇ ಕೋಪವೂ ಕರಗುತ್ತದೆ.

ಇದನ್ನೂ ಓದಿ.. ‘ಟೀಂ ಇಂಡಿಯಾ ಕ್ರಿಕೆಟಿಗರಿಗೆ ಸ್ವಲ್ಪ ರಜಾ ಕೊಡಿ’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮುಂದಿನ ಸುದ್ದಿ
Show comments