ಕೋಪ ಬಂದರೆ ಇದನ್ನು ತಪ್ಪದೇ ಮಾಡಿ ನೋಡಿ

Webdunia
ಭಾನುವಾರ, 10 ಸೆಪ್ಟಂಬರ್ 2017 (07:59 IST)
ಬೆಂಗಳೂರು: ಸಿಟ್ಟು.. ಯಾರಿಗೆ ತಾನೇ ಬರಲ್ಲ? ಕೆಲವರು ಸಣ್ಣ ಪುಟ್ಟ ವಿಷಯಕ್ಕೂ ಅತಿಯಾಗಿ ಸಿಟ್ಟು ಮಾಡಿಕೊಂಡು ಸಂಬಂಧವನ್ನೇ ಹಾಳು ಮಾಡಿಕೊಳ್ಳುತ್ತಾರೆ. ಹಾಗಾದರೆ ಸಿಟ್ಟು ಕಂಟ್ರೋಲ್ ಮಾಡಬೇಕಾದರೆ ಇವುಗಳನ್ನು ಮಾಡಿ ನೋಡಿ.

 
ಮಾತಾಡುವ ಮೊದಲು ಯೋಚಿಸಿ
ಮಾತು ಆಡಿದರೆ ಮುತ್ತು, ಒಡೆದರೆ ಹೋಯ್ತು ಅಂತಾರೆ. ಹಾಗಾಗಿ ಯಾರೊಂದಿಗೆ ಏನೇ ಮಾತನಾಡಬೇಕಾದರೂ ಯೋಚಿಸಿ ಮಾತನಾಡಿ. ಎಲ್ಲರೊಂದಿಗೂ ನಾನು ಹೀಗೇ ಮಾತನಾಡುವುದು ಎಂಬ ಉದ್ಧಟತನ ತೋರಬೇಡಿ. ಸಮಯ ಸಂದರ್ಭಕ್ಕೆ ತಕ್ಕಂತೆ ಮಾತು, ವರ್ತನೆ ಇರಲಿ.

ಮೌನವಾಗಿರಿ
ಕೋಪ ಬಂದಾಗ ಮೌನವಾಗಿರುವುದೇ ಒಳ್ಳೆಯದು. ಕೋಪದ ಭರದಲ್ಲಿ ಕೈಗೊಳ್ಳುವ ನಿರ್ಧಾರಗಳು ಯಾವತ್ತೂ ಸೂಕ್ತವಾಗಿರುವುದಿಲ್ಲ. ಹಾಗಾಗಿ ಮಾತನಾಡುವ ಬದಲು ಮೌನವಾಗಿದ್ದು, ನಂತರ ನಿಮಗೆ ಏಕೆ ಕೋಪ ಬಂದಿದೆ ಎಂಬುದನ್ನು ವಿಮರ್ಶಿಸಿ. ಸಾಧ್ಯವಾದರೆ ನಿಮ್ಮ ಕೋಪಕ್ಕೆ ಕಾರಣವಾದವರೊಂದಿಗೆ ಶಾಂತವಾದೊಡನೆ ಕಾರಣ ಚರ್ಚಿಸಿ.

ಹೊರಗೆ ಹೋಗಿ
ಕೋಪ ಬಂದ ತಕ್ಷಣ ಕೂಗಾಡುವ ವ್ಯಕ್ತಿಗಳು ನೀವಾಗಿದ್ದರೆ, ಆ ಸ್ಥಳದಿಂದ ಜಾಗ ಖಾಲಿ ಮಾಡುವುದು ಒಳ್ಳೆಯದು. ಆ ಸಂದರ್ಭದಲ್ಲಿ ಹೊರಗಡೆ ಒಂದು ವಾಕಿಂಗ್ ಹೋಗಿ. ಇದರಿಂದ ಮನಸ್ಸೂ ಸ್ವಲ್ಪ ಹಗುರವಾಗುತ್ತದೆ. ಹಾಗೆಯೇ ಕೋಪವೂ ಕರಗುತ್ತದೆ.

ಇದನ್ನೂ ಓದಿ.. ‘ಟೀಂ ಇಂಡಿಯಾ ಕ್ರಿಕೆಟಿಗರಿಗೆ ಸ್ವಲ್ಪ ರಜಾ ಕೊಡಿ’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಮುಂದಿನ ಸುದ್ದಿ
Show comments