Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 2 ಜನವರಿ 2020 (09:02 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಸಾಂಸಾರಿಕವಾಗಿ ಸಂತಸದ ದಿನಗಳಿವು. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗುವಿರಿ. ದೃಢ ಮನಸ್ಸಿನಿಂದ ಹೆಜ್ಜೆ ಹಾಕಿದರೆ ಕಾರ್ಯರಂಗದಲ್ಲಿ ಯಶಸ್ಸು ಸಾಧ‍್ಯ. ಮೇಲಧಿಕಾರಿಗಳ ಕಿರಿ ಕಿರಿ ಇದ್ದರೂ ವೃತ್ತಿರಂಗದಲ್ಲಿ ಮುನ್ನಡೆ, ಅಭಿವೃದ್ಧಿ ಸಿಗಲಿದೆ.

ವೃಷಭ: ಸ್ವತಂತ್ರವಾಗಿ ಯೋಚನೆ ಮಾಡುವ ನಿಮ್ಮ ಗುಣದಿಂದ ಕಾರ್ಯರಂಗದಲ್ಲಿ ಮುನ್ನಡೆ ಸಾಧಿಸಲಿದ್ದೀರಿ. ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಮಿಥುನ: ಅಧಿಕಾರಿ ವರ್ಗದವರಿಂದ ಮನಸ್ಸಿಗೆ ನೆಮ್ಮದಿ ಇರದು. ವಿದ್ಯಾರ್ಥಿಗಳಿಗೆ ವಿದೇಶ ಯಾನದ ಯೋಗವಿದೆ. ಸಾಂಸಾರಿಕವಾಗಿ ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಆರ್ಥಿಕವಾಗಿ ಹಣಕಾಸಿನ ತೊಂದರೆ ಪರಿಹಾರವಾಗಲಿದೆ.

ಕರ್ಕಟಕ: ಉದಾರ ಮನೋಭಾವದಿಂದ ಆರ್ಥಿಕವಾಗಿ ಸಹಾಯ ಮಾಡಲು ಹೋಗಿ ಸಂಕಷ್ಟಕ್ಕೆ ಸಿಲುಕಬೇಡಿ. ಅನಿರೀಕ್ಷಿತವಾಗಿ ಧನಾಗಮವಾಗಲಿದೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗವಿದೆ. ಹಿತಶತ್ರುಗಳ ಬಾಧೆ ನಿವಾರಣೆಯಾಗಲಿದೆ.

ಸಿಂಹ: ಕೋರ್ಟು ಕಚೇರಿ ವ್ಯವಹಾರಗಳಲ್ಲಿ ನಿಮ್ಮ ಪರವಾಗಿ ತೀರ್ಪು ಬರಲಿದೆ. ಸಾಂಸಾರಿಕವಾಗಿ ಎದುರಾಗುವ ಕಷ್ಟಗಳಿಗೆ ಹಿರಿಯರ ಸಲಹೆ ಪಡೆಯಿರಿ. ದೂರ ಸಂಚಾರದಿಂದ ಕಾರ್ಯ ಸಿದ್ಧಿಯಾಗಲಿದೆ. ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗದ ಯೋಗವಿದೆ.

ಕನ್ಯಾ: ಸಹೋದ್ಯೋಗಿಗಳಿಗೆ ತೊಂದರೆ ಬಂದಾಗ ಸಹಾಯಕ್ಕೆ ಧಾವಿಸುವಿರಿ. ಅಧಿಕಾರಿಗಳಿಂದ ತೊಂದರೆ ಉಂಟಾಗಬಹುದು. ತಾಳ್ಮೆಯಿಂದಿರಿ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡದಿರಿ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಉದ್ಯೋಗ ವ್ಯವಹಾರ ರಂಗದಲ್ಲಿ ನಿಮ್ಮ ಕ್ರಿಯಾತ್ಮಕತೆಗೆ ತಕ್ಕ ಪ್ರತಿಫಲ ಸಿಗಲಿದೆ. ನಿಮ್ಮ ಸ್ಥಾನ ಮಾನ ಅಧಿಕವಾಗಲಿದೆ. ವಾಹನ ಖರೀದಿ ಯೋಗವಿದೆ. ಆದರೆ ಚಾಲನೆಯಲ್ಲಿ ಎಚ್ಚರಿಕೆಯಿಂದಿರಬೇಕು. ಹಿತಶತ್ರುಗಳ ಕಾಟ ಎದುರಾಗಬಹುದು, ಎಚ್ಚರಿಕೆಯಿಂದಿರಿ.

ವೃಶ್ಚಿಕ: ಆರ್ಥಿಕವಾಗಿ ಚೇತರಿಕೆ ಕಂಡುಬರಲಿದ್ದು, ಕೆಲಸ ಕಾರ್ಯಗಳು ನಿರ್ವಿಘ್ನವಾಗಿ ನೆರವೇರಲಿದೆ. ಕಷ್ಟದ ಸಂದರ್ಭದಲ್ಲಿ ಮಿತ್ರರ ಸಹಕಾರ ದೊರೆಯಲಿದೆ. ಮಹಿಳೆಯರಿಂದ ತೊಂದರೆಗಳು ಎದುರಾಗಬಹುದು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ.

ಧನು: ಶನಿ ಕಾಟದಿಂದಾಗಿ ನಿಮ್ಮ ಕೆಲಸ ಕಾರ್ಯಗಳಲ್ಲಿ ತೊಂದರೆಗಳು ಎದುರಾದೀತು. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಎದುರಾಗಲಿದೆ. ವಾಹನ ಸಂಚಾರದಲ್ಲಿ ಎಚ್ಚರ. ಕೌಟುಂಬಿಕ ವಿವಾದಗಳು ಪರಿಹಾರವಾಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಮಕರ: ಪ್ರಯತ್ನ ಬಲದಿಂದ ಕಾರ್ಯ ಸಿದ್ಧಿಯಾಗಬಹುದು. ಮನಸ್ಸಿಗೂ ಒತ್ತಡವಾಗಬಹುದು. ಆದರೆ ತಾಳ್ಮೆಯಿಂದಲೇ ಎಲ್ಲವನ್ನೂ ನಿಭಾಯಿಸಬೇಕಾಗಬಹುದು. ಹಣಕಾಸಿನ ತೊಂದರೆಗೆ ಪರಿಹಾರ ಕಂಡುಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಕುಂಭ: ಆರ್ಥಿಕವಾಗಿ ಧನಲಾಭವಾಗಲಿದೆ. ಆದರೆ ಗೃಹೋಪಯೋಗಿ ವಸ್ತುಗಳಿಗಾಗಿ ಧನವ್ಯಯವಾಗಲಿದೆ. ಸಂಗಾತಿಯ ಸಹಕಾರ ಸಿಗಲಿದೆ. ಅನಿರೀಕ್ಷಿತವಾಗಿ ಹಳೆಯ ಮಿತ್ರರ ಭೇಟಿಯಾಗುವಿರಿ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಬೇಡದ ವಿಚಾರಗಳಿಗೆ ಚಿಂತೆ ಬೇಡ.

ಮೀನ: ಹೊಸ ಕೆಲಸಗಳಿಗೆ ಕೈ ಹಾಕುವ ಮುನ್ನ ಹಲವು ಬಾರಿ ಯೋಚಿಸಿ ಮುಂದೆ ಹೆಜ್ಜೆಯಿಡಿ. ಆರೋಗ್ಯದಲ್ಲಿ ಸುಧಾರಣೆಯಾಗಬಹುದು. ಆದರೆ ಮಾನಸಿಕವಾಗಿ ಚಿತ್ತಚಾಂಚಲ್ಯ ಕಾಡಬಹುದು. ನಿರುದ್ಯೋಗಿಗಳಿಗೆ ನಿರೀಕ್ಷಿತ ಉದ್ಯೋಗ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಖಾಲಿ ಹೊಟ್ಟೆಯಲ್ಲಿ ಜಾಗಿಂಗ್ ಮಾಡುವಾಗ ಅಡ್ಡಪರಿಣಾಮಗಳ ಬಗ್ಗೆ ಎಚ್ಚರಿಕೆಯಿರಲಿ

ಪುದೀನಾ ಸೊಪ್ಪು ಬಳಸಿ ಕಲೆ ನಿವಾರಿಸಲು ಹೀಗೆ ಮಾಡಿ

ದೇಸೀ ಸನ್ ಸ್ಕ್ರೀನ್ ಲೋಷನ್ ಮನೆಯಲ್ಲಿಯೇ ಮಾಡಿ

ಸೆಕೆಗಾಲದಲ್ಲಿ ಪದೇ ಪದೇ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಅಸ್ತಮಾ ರೋಗಿಗಳು ಹಾಲು ಹೇಗೆ ಸೇವಿಸಬೇಕು ಮತ್ತು ಬೆಸ್ಟ್ ಟೈಮ್ ಯಾವುದು ತಿಳಿಯಿರಿ

ಮುಂದಿನ ಸುದ್ದಿ
Show comments