Webdunia - Bharat's app for daily news and videos

Install App

ಕರಿದ ತಿಂಡಿಗಳಿಂದ ಎಣ್ಣೆಯನ್ನು ತೆಗೆಯಲು ನ್ಯೂಸ್ ಪೇಪರ್ ಗಳನ್ನು ಬಳಸುತ್ತಿದ್ದೀರಾ. ಹಾಗಾದ್ರೆ ನಿಮಗೆ ಅಪಾಯ ಗ್ಯಾರಂಟಿ!

Webdunia
ಮಂಗಳವಾರ, 17 ಏಪ್ರಿಲ್ 2018 (15:50 IST)
ಬೆಂಗಳೂರು : ಬೋಂಡಾ, ಬಜ್ಜಿ ಇನ್ಯಾವುದೇ ಕರಿದ ತಿಂಡಿಗಳಲಿರಲಿ, ಅದರಲ್ಲಿರುವ ಅಧಿಕ ಎಣ್ಣೆಯನ್ನು ತೆಗೆಯಲು ನಾವು ಸಾಧಾರಣವಾಗಿ ಸುದ್ದಿ ಪತ್ರಿಕೆಯನ್ನು ಬಳಸುತ್ತೇವೆ. ಸುಲಭವಾಗಿ ಕೈಗೆ ಸಿಗುವ ಸುದ್ದಿ ಪತ್ರಿಕೆಯ ತುಂಡೊಂದರ ನಡುವೆ ತಿಂಡಿಯನ್ನಿಟ್ಟು ಅದರಲ್ಲಿದ್ದ ಎಣ್ಣೆಯನ್ನು ಹೀರುವಂತೆ ಮಾಡುತ್ತೇವೆ. ಈ ರೀತಿ ನೀವು ಮಾಡುತ್ತಿದ್ದರೆ ಗಮನಿಸಿ, ತಿಂಡಿಗಳಿಂದ ಯಾವತ್ತೂ ಎಣ್ಣೆಯನ್ನು ಹೀರುವುದಕ್ಕಾಗಿ ಸುದ್ದಿಪತ್ರಿಕೆಗಳನ್ನು ಬಳಸಲೇ ಬೇಡಿ. ಇದು ನಿಮ್ಮ ಆರೋಗ್ಯದ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬುದಕ್ಕೆ ಇಲ್ಲಿದೆ ಕಾರಣ.


*ಸುದ್ದಿಪತ್ರಿಕೆಗಳಲ್ಲಿ ಬಳಸಲ್ಪಡುವ ಶಾಯಿ ದೇಹಕ್ಕೆ ಹಾನಿಕಾರಕ. ತಿಂಡಿಗಳಿಂದ ಎಣ್ಣೆ ತೆಗೆಯಲು ಪತ್ರಿಕೆಗಳನ್ನು ಬಳಸಿದಾಗ ಆ ಶಾಯಿ ತಿಂಡಿಗೆ ಅಂಟಿಕೊಳ್ಳುತ್ತದೆ. ತಿಂಡಿಯ ಮೂಲಕ ಶಾಯಿ ಕೂಡಾ ನಮ್ಮ ದೇಹದೊಳಗೆ ಹೋಗುತ್ತದೆ. ಇದು ಕ್ಯಾನ್ಸರ್‌ನ್ನು ಉಂಟು ಮಾಡಬಲ್ಲದು.

*ಸುದ್ದಿಪತ್ರಿಕೆಗಳಲ್ಲಿ ಗ್ರಾಫೈಟ್ ಅಂಶವಿದೆ. ಇದು ವಿಷಕಾರಿಯಾಗಿದ್ದು ಕಿಡ್ನಿ ಮತ್ತು ಶ್ವಾಸಕೋಶಕ್ಕೆ ತೊಂದರೆಯನ್ನುಂಟು ಮಾಡುತ್ತದೆ.

*ಇಂಥಾ ವಿಷಕಾರಿ ವಸ್ತುಗಳು ನಮಗೆ ಗೊತ್ತಿಲ್ಲದೆಯೇ ನಮ್ಮ ಹೊಟ್ಟೆಯೊಳಗೆ ಸೇರುವುದರಿಂದ ಜೀರ್ಣಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುವುದಲ್ಲದೆ, ಹಾರ್ಮೋನ್‌ಗಳ ಮೇಲೆಯೂ ಇದು ಪರಿಣಾಮ ಬೀರುತ್ತದೆ.

ಇಂತಹ ತಿಂಡಿಗಳಿಂದ ಎಣ್ಣೆಯನ್ನು ತೆಗೆಯಲೇ ಬೇಕು ಎಂದಿದ್ದರೆ ಸುದ್ದಿ ಪತ್ರಿಕೆಯ ಬದಲು ಟಿಶ್ಯೂ ಪೇಪರ್‌ಗಳನ್ನು ಬಳಸಿ. ಬಿಳಿ ಖಾಲಿ ಹಾಳೆಗಳನ್ನು ಬಳಸಿ, ಆದರೆ ಯಾವತ್ತೂ ಪ್ರಿಂಟ್ ಇರುವ ಪೇಪರ್‌ಗಳನ್ನು ಬಳಸಲೇ ಬೇಡಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments