Webdunia - Bharat's app for daily news and videos

Install App

ದೀರ್ಘಾಯುಷಿಗಳಾಗಬೇಕೇ? ಹಾಗಿದ್ದರೆ ಇವುಗಳನ್ನು ಸೇವಿಸಿ

Webdunia
ಬುಧವಾರ, 15 ನವೆಂಬರ್ 2017 (08:26 IST)
ಬೆಂಗಳೂರು: ಪ್ರತಿಯೊಬ್ಬರಿಗೂ ಜೀವನದ ಮೇಲೆ ಆಸೆ ಇದ್ದೇ ಇರುತ್ತದೆ. ತಾನು ಹೆಚ್ಚು ಕಾಲ ಬದುಕಬೇಕೆಂಬುದಕ್ಕಾಗಿ ಮುನಷ್ಯ ಪ್ರತಿನಿತ್ಯ ಹೋರಾಟ ಮಾಡುತ್ತಾನೆ. ಈ ರೀತಿ ದೀರ್ಘಾಯುಷಿಗಳಾಗಬೇಕಾದರೆ ಕೆಲವು ಆಹಾರವೂ ಪ್ರಮುಖ ಪಾತ್ರ ವಹಿಸುತ್ತವೆ. ಅವು ಯಾವುವು ನೋಡೋಣ.

 
ನೆಲ್ಲಿಕಾಯಿ
ಬೆಟ್ಟದ ನೆಲ್ಲಿಕಾಯಿ ಸುದೀರ್ಘ ಜೀವನಕ್ಕೆ ರಹದಾರಿ ಎಂದು ಹಲವು ಆಯುರ್ವೇದ ತಜ್ಞರು ಹೇಳುತ್ತಾರೆ. ದೇಹದ ಮೂರು ಸ್ಥಿತಿಗಳಾದ ವಾತ, ಕಫ ಮತ್ತು ಪಿತ್ಥ ಇವು ಮೂರನ್ನೂ ಸಮತೋಲನದಲ್ಲಿಡಲು ನೆಲ್ಲಿಕಾಯಿ ಸಹಕಾರಿ. ಇದರಲ್ಲಿ ರೋಗ ನಿರೋಧಕ ಶಕ್ತಿಯೂ ಅಧಿಕವಾಗಿದ್ದು, ವಯಸ್ಸಾಗುವಿಕೆಯನ್ನು ತಡೆಗಟ್ಟುವ ಗುಣ ಹೊಂದಿದೆ.

ಶುಂಠಿ
ಶೀತ, ಕೆಮ್ಮು  ಬಂದರೆ ಶುಂಠಿ ಸೇವಿಸುತ್ತೇವೆ. ಈ ಶುಂಠಿಯಲ್ಲಿ ಸುಮಾರು ರೀತಿಯ ಆಂಟಿ ಆಕ್ಸಿಡೆಂಟ್ ಗುಣವಿದೆ ಎನ್ನಲಾಗುತ್ತದೆ. ಇದು ಹೃದಯ ಖಾಯಿಲೆ, ಕ್ಯಾನ್ಸರ್, ಎಲುಬಿನ ಸಮಸ್ಯೆಯಂತಹ ಗಂಭೀರ ಸಮಸ್ಯೆಗಳು ಬರದಂತೆ ನಮ್ಮ ದೇಹವನ್ನು ರಕ್ಷಿಸುತ್ತದೆ ಎನ್ನಲಾಗುತ್ತದೆ.

ಏಲಕ್ಕಿ
ಸಿಹಿ ತಿನಿಸು, ಪಾಯಸ ಮಾಡುವುದಿದ್ದರೆ ಏಲಕ್ಕಿ ಬೇಕೇ ಬೇಕು. ಏಲಕ್ಕಿಯಲ್ಲಿ ನಮ್ಮ ದೇಹದ ಒಳಗಿರುವ ವಿಷಕಾರಿ ಅಂಶವನ್ನು ಹೊರ ಹಾಕುವ ಗುಣವಿದೆಯಂತೆ. ಇದು ನಮ್ಮ ಜೀರ್ಣ ಪ್ರಕ್ರಿಯೆಯನ್ನು ಸುಗಮಗೊಳಿಸುವುದಲ್ಲದೆ, ರಕ್ತದಲ್ಲಿ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.

ಜೀರಿಗೆ
ನಮ್ಮ ಅಡುಗೆ ಮನೆಯಲ್ಲಿ ಸಿಗುವ ಸಾಮಾನ್ಯ ವಸ್ತು ಇದು. ಇದು ಎಲ್ಲಾ ರೀತಿಯ ಉದರ ಸಮಸ್ಯೆಗೆ ಪರಿಹಾರ ಒದಗಿಸುತ್ತದೆ. ಅಷ್ಟೇ ಅಲ್ಲದೆ, ಇದು ನರ ವ್ಯೂಹವನ್ನು ಚುರುಕುಗೊಳಿಸುತ್ತದೆ. ಪ್ರತಿ ನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜೀರಿಗೆ ಹಾಕಿದ ನೀರು ಸೇವಿಸುವುದು ತುಂಬಾ ಉತ್ತಮ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ಮುಂದಿನ ಸುದ್ದಿ
Show comments